Sunday, April 20, 2025
Google search engine

Homeಅಪರಾಧಬೈಕ್- ಕಾರು ನಡುವೆ ಅಪಘಾತ: ಇಬ್ಬರ ಸಾವು

ಬೈಕ್- ಕಾರು ನಡುವೆ ಅಪಘಾತ: ಇಬ್ಬರ ಸಾವು

ಚಿಕ್ಕಮಗಳೂರು: ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ಜಿಲ್ಲೆಯ ಕಡೂರು ನಗರದಲ್ಲಿ ನಡೆದಿದೆ.

ಹೊಸದುರ್ಗ ತಾಲೂಕಿನ ಅಗಲಕೆರೆ ಗ್ರಾಮದ ಲೋಹಿತ್ (35), ನಾಗರಾಜ್ (40) ಮೃತರು.

ಇವರಿಬ್ಬರೂ ಚಿಕ್ಕಮಗಳೂರು ಮಾರ್ಗದಿಂದ ಕಡೂರು ಪಟ್ಟಣದ ಕಡೆ ಬೈಕ್ ​ನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.

ರಭಸವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದ ಹಿನ್ನೆಲೆ ದ್ವಿಚಕ್ರ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು, ಸ್ಥಳದಲ್ಲೇ ಹೊತ್ತಿ ಉರಿದಿದೆ.

ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಕಡೂರು ಪೊಲೀಸ್ ಠಾಣೆಯ ಪಿಎಸ್ ​ಐ ಧನಂಜಯ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಡೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಿದ್ದಾರೆ.

RELATED ARTICLES
- Advertisment -
Google search engine

Most Popular