ಮಂಗಳೂರು (ದಕ್ಷಿಣ ಕನ್ನಡ): ಬೈಕ್ ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಮಂಗಳಪದವು ಎಂಬಲ್ಲಿ ನಡೆದಿದೆ.
ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಬಾಕ್ಸೈಟ್ ಮಣ್ಣು ಸಾಗಾಟ ಮಾಡುತ್ತಿದ್ದ ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ಅದಕ್ಕೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಒಕ್ಕೆತ್ತೂರಿನ ಫಾರಿಸ್ ಮತ್ತು ಇರ್ಫಾನ್ ಎಂದು ಹೇಳಲಾಗುತ್ತಿದ್ದು, ಇಬ್ಬರನ್ನೂ ಮಂಗಳೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ. ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಲಾರಿ ಚಾಲಕ ಬೇಜಾಬ್ದಾರಿತನದಿಂದ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿ ಚಾ ಕುಡಿಯಲು ಹೋಗಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.