Friday, April 18, 2025
Google search engine

Homeರಾಜ್ಯಬಿಟ್ ಕಾಯಿನ್ ಹಗರಣ: ಶ್ರೀಕಿ ಸೇರಿ 3 ಆರೋಪಿಗಳಿಗೆ ಜಾಮೀನು ಮಂಜೂರು

ಬಿಟ್ ಕಾಯಿನ್ ಹಗರಣ: ಶ್ರೀಕಿ ಸೇರಿ 3 ಆರೋಪಿಗಳಿಗೆ ಜಾಮೀನು ಮಂಜೂರು

ತುಮಕೂರು: ಬಿಟ್ ಕಾಯಿನ್ ಕಳವು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕಿ ಸೇರಿದಂತೆ ಮೂವರಿಗೆ ತುಮಕೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಆರೋಪಿ ಶ್ರೀಕಿಯೊಂದಿಗೆ ರಮೇಶ್, ರಬೀನ್ ಖಂಡೇಲ್ ವಾಲಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಈ ಮೂವರು ಆರೋಪಿಗಳು ಜಾಮೀನು ಕೋರಿ ನಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ೧ನೇ ಹೆಚ್ಚುವರಿ ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದ.ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಎನ್.ಸುಬ್ರಹ್ಮಣ್ಯ ಅವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದಾರೆ.

ಆರೋಪಿ ಶ್ರೀಕಿಯಿಂದ ೫೦ ಸಾವಿರ ಮೊತ್ತದ ಬಾಂಡ್ ಹಾಗೂ ಓರ್ವ ವ್ಯಕ್ತಿ ಶೂರಿಟಿ ಪಡೆಯಲಾಗಿದೆ. ಆರೋಪಿ ರಾಬೀನ್ ಖಂಡೇಲ್ ವಾಲ ಬಳಿ ೨೫ ಸಾವಿರ ಮೌಲ್ಯದ ಬಾಂಡ್ ಹಾಗೂ ಓರ್ವ ವ್ಯಕ್ತಿಯ ಶೂರಿಟಿ ಪಡೆಯಲಾಗಿದೆ. ತನಿಖೆ ನಡೆಸಿ ೬೦ ದಿನದೊಳಗೆ ಪೊಲೀಸರು ನ್ಯಾಯಾಲಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ಶೀಟ್ ಸಲ್ಲಿಸಲು ವಿಳಂಬವಾದ ಹಿನ್ನೆಲೆ ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಜಾಮೀನು ಮಂಜೂರು ಮಾಡಲಾಗಿದೆ. ತುಮಕೂರು ಉದ್ಯಮಿಯೊಬ್ಬರಿಗೆ ಆನ್‌ಲೈನ್ ವಂಚಿಸಿದ ಹಿನ್ನೆಲೆ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿತ್ತು.

RELATED ARTICLES
- Advertisment -
Google search engine

Most Popular