ಬೆಂಗಳೂರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ 20 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದಾಗಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಕೇಸ್ನಲ್ಲಿ ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದಿರುವ ಎಲ್.ಆರ್.ಶಿವರಾಮೇಗೌಡ ಇದೀಗ ಯೂನಿಯನ್ ಬ್ಯಾಂಕ್ ವಂಚನೆ ಕೇಸ್ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆ ಸಲ್ಲಿಸಲು ಸಿಬಿಐ ಪರ ಅಭಿಯೋಜಕರು ಕಾಲಾವಕಾಶ ಕೋರಿದ್ದು, ಆಕ್ಷೇಪಣೆ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿ ವಿಚಾರಣೆಯನ್ನು ಆ.7ಕ್ಕೆ ಮುಂದೂಡಲಾಗಿದೆ.
ಜಮೀನು ಮಾಲೀಕರೊಂದಿಗೆ ಸೇರಿ ಬ್ಯಾಂಕ್ಗಳಿಂದ 32 ಕೋಟಿ ರೂ. ಪಡೆದುಕೊಳ್ಳಲಾಗಿದೆ. ಶಾಲೆಯ ಬಾಡಿಗೆಯ ಹಣವನ್ನು ಬ್ಯಾಂಕ್ಗೆ ನೀಡುವುದಾಗಿ ಒಡಂಬಡಿಕೆ ಮಾಡಲಾಗಿದೆ.
ಇನ್ನು ಎಲ್.ಆರ್.ಶಿವರಾಮೇಗೌಡ ರಾಯಲ್ ಕಾನ್ಕಾರ್ಡ್ ಸಂಸ್ಥೆಯ ಟ್ರಸ್ಟಿ ಆಗಿದ್ದು, ವರ್ತೂರಿನ ಅಂಬಲೀಪುರದ ಜಮೀನಿನ ಮೇಲೆ ಮಾಲೀಕರು ಸಾಲ ಪಡೆದಿದ್ದಾರೆ. ಒಪ್ಪಂದದಂತೆ ಸಾಲ ತೀರಿಸದೇ ಇದ್ದಾಗ ವಂಚನೆ ಆರೋಪದಡಿ ಸಿಬಿಐ ಕೇಸ್ ದಾಖಲಿಸಲಾಗಿದೆ.