Tuesday, June 10, 2025
Google search engine

Homeರಾಜ್ಯಬಿಜೆಪಿ ಶಾಸಕಾಂಗ ಪಕ್ಷದ ಸಭೆ: ನಾಯಕರ ಜೊತೆ ಕೇಂದ್ರ ಸಚಿವೆ ಚರ್ಚೆ

ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ನಾಯಕರ ಜೊತೆ ಕೇಂದ್ರ ಸಚಿವೆ ಚರ್ಚೆ

ಬೆಂಗಳೂರು: ಪ್ರತಿಪಕ್ಷ ನಾಯಕರ ಆಯ್ಕೆ ಸಂಬಂಧ ಹೈಕಮಾಂಡ್ ಪ್ರತಿನಿಧಿಗಳಾಗಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಗೌತಮ್ ಕುಮಾರ್ ಪಕ್ಷದ ಹಿರಿಯ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಜೊತೆಗೆ ಮಾತುಕತೆ ನಡೆಸಿದರು.

ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಮೊದಲು ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿ ಜಗನ್ನಾಥ ಭವನಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್ ಹಾಗೂ ದುಶ್ಯಂತ್ ಗೌತಮ್ ಕುಮಾರ್ ನಂತರ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ನಿವಾಸ ಧವಳಗಿರಿಗೆ ಭೇಟಿ ನೀಡಿದರು. ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜೊತೆಯಲ್ಲಿ ಬಿಎಸ್‌ವೈ ಭೇಟಿಯಾದ ಹೈಕಮಾಂಡ್ ಪ್ರತಿನಿಧಿಗಳು ಕುಶಲೋಪರಿ ವಿಚಾರಿಸಿ ಕೆಲ ಸಮಯ ಮಾತುಕತೆ ನಡೆಸಿದರು.

RELATED ARTICLES
- Advertisment -
Google search engine

Most Popular