Monday, December 15, 2025
Google search engine

Homeರಾಜಕೀಯಮತದಾನದ ಪವಿತ್ರ ಶಕ್ತಿ ಮೇಲೆ BJP-RSS ನಿಂದ ಆಕ್ರಮಣ: ಸಿಎಂ ಸಿದ್ದರಾಮಯ್ಯ

ಮತದಾನದ ಪವಿತ್ರ ಶಕ್ತಿ ಮೇಲೆ BJP-RSS ನಿಂದ ಆಕ್ರಮಣ: ಸಿಎಂ ಸಿದ್ದರಾಮಯ್ಯ

ನವದೆಹಲಿ: ಮತದಾನವೆಂಬ ಪವಿತ್ರ ಶಕ್ತಿ ಮೇಲೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ಆಕ್ರಮಣವಾಗುತ್ತಿದ್ದು, ಪ್ರಜಾಪ್ರಭುತ್ವದ ರಕ್ಷಣೆಗೆ ಹೋರಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಕರೆ ನೀಡಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಮತಚೋರಿ ವಿರುದ್ಧ ನಡೆದ ಬೃಹತ್ ರ್ಯಾಲಿ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಎಕ್ಸ್‌ ಖಾತೆಯಲ್ಲಿ ಸುದೀರ್ಘ ಟ್ವಿಟ್ ಮಾಡುವ ಮೂಲಕ ಈ ಬಗ್ಗೆ ಹೇಳಿದ್ದಾರೆ.

ಈ ವೇಳೆ ದೆಹಲಿಯಲ್ಲಿ ನಾವು ಒಂದು ಪಕ್ಷವಾಗಿ ಅಥವಾ ಕೇವಲ ಮತದಾರರಾಗಿ ಸೇರಿರಲಿಲ್ಲ. ಭಾರತೀಯ ಗಣರಾಜ್ಯದ ರಕ್ಷಕರಾಗಿ ಸೇರಿದ್ದೆವು. ಮತದಾನದ ಹಕ್ಕು ನಮ್ಮ ಸಂವಿಧಾನದಿಂದ ಪ್ರತಿಯೊಬ್ಬ ಪೌರನಿಗೆ ನೀಡಲಾದ ಅತ್ಯಂತ ಪವಿತ್ರ ಭರವಸೆ. ಆ ಪವಿತ್ರ ಶಕ್ತಿಗೆ ಇಂದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ಆಕ್ರಮಣವಾಗುತ್ತಿದ್ದು, ಬಿಜೆಪಿ ಮಾಡುತ್ತಿರುವುದು ಕೇವಲ ತಾಂತ್ರಿಕ ತಪ್ಪುಗಳಲ್ಲ, ಅದು ಜನರ ಆದೇಶವನ್ನು ವ್ಯವಸ್ಥಿತವಾಗಿ ಕದಿಯುವ ಮಾರ್ಗ ಎಂದು ಕಿಡಿಕಾರಿದ್ದಾರೆ.

ಅಲ್ಲದೇ ಕದ್ದ ಮತಗಳಿಂದ ಹುಟ್ಟಿದ ಸರ್ಕಾರ ಜನ ತಾಂತ್ರಿಕವಲ್ಲ, ಅದು ಪ್ರಜಾಪ್ರಭುತ್ವವನ್ನು ಒಳಗಿಂದೊಳಗೆ ಕೊರೆಯುತ್ತದೆ. ಇಂದು ಮತಚೋರಿ ಭಾರತೀಯ ಜನತಂತ್ರಕ್ಕೆ ಬಂದಿರುವ ಅತಿ ದೊಡ್ಡ ಬೆದರಿಕೆ. ಈ ಕತ್ತಲೆಯ ಕಾಲದಲ್ಲಿ ರಾಹುಲ್ ಗಾಂಧಿಯವರು, ಕರ್ನಾಟಕ, ಹರಿಯಾಣ, ಬಿಹಾರ ಮೊದಲಾದ ಕಡೆಗಳಲ್ಲಿ ನಡೆದಿರುವ ಅಕ್ರಮಗಳನ್ನು ಬಯಲು ಮಾಡುವ ಮೂಲಕ ಮತಚೋರಿಯು ಕೇವಲ ಆರೋಪವಲ್ಲ, ವಾಸ್ತವತೆ ಎಂಬುದನ್ನು ತೋರಿಸಿದ್ದಾರೆ ಎಂದು ಹೇಳಿದ್ದಾರೆ.

ಇನ್ನೂ ಕರ್ನಾಟಕದಲ್ಲೇ ಮಹದೇವಪುರ ಮತ್ತು ಆಳಂದ ಕ್ಷೇತ್ರಗಳಲ್ಲಿ ಗಂಭೀರ ಅಕ್ರಮಗಳು ಬಯಲಾದವು. ಆಳಂದದಲ್ಲಿ ಸುಮಾರು 6,000 ನ್ಯಾಯಸಮ್ಮತ ಮತದಾರರನ್ನು ಅಳಿಸುವ ಪ್ರಯತ್ನ ನಡೆದಿದೆ. ಇದರ ವಿರುದ್ಧ ನಿನ್ನೆ ಚಾರ್ಜ್‌ ಶೀಟ್ ಸಲ್ಲಿಕೆಯಾಗಿ ಬಿಜೆಪಿ ಮಾಜಿ ಶಾಸಕ ಮತ್ತು ಅವರ ಮಗನ ಹೆಸರುಗಳು ಬಂದಿವೆ. ಇದು ಸತ್ಯ ಮುಖ್ಯವೆಂಬುದಕ್ಕೆ ಸಾಕ್ಷಿ. ದೆಹಲಿಯ ಈ ಐತಿಹಾಸಿಕ ರ್ಯಾಲಿಯಿಂದ ನಾನು ಪ್ರತಿಯೊಬ್ಬ ಭಾರತೀಯನಿಗೆ ಕರೆನೀಡುತ್ತೇನೆ. ನಿಮ್ಮ ಮತವನ್ನು ರಕ್ಷಿಸಿ, ಪ್ರಜಾಪ್ರಭುತ್ವವನ್ನು ರಕ್ಷಿಸಿ ಎಂದು ಕರೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular