ಮದ್ದೂರು: ಬೆಲೆ ಏರಿಕೆ ಖಂಡಿಸಿ ಮದ್ದೂರಿನ ಟಿ.ಬಿ. ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಮನ್ ಮುಲ್ ನಿರ್ದೇಶಕ ಎಸ್ ಪಿಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ರೂಪ, ಸೇರಿ ಹಲವರು ಭಾಗಿಯಾಗಿದ್ದಾರೆ.