Friday, April 11, 2025
Google search engine

HomeUncategorizedರಾಷ್ಟ್ರೀಯಬೆಂಗಳೂರು-ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ

ಬೆಂಗಳೂರು-ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ

ಅಯೋಧ್ಯೆ: ಬೆಂಗಳೂರಿಂದ ಅಯೋಧ್ಯೆ ನಡುವೆ ಸಂಚರಿಸುವ ವಿಮಾನಕ್ಕೆ ಬಾಂಬ್‌ ಬೆದರಿಕೆ ಹಿನ್ನೆಲೆಯಲ್ಲಿ ಅಯೋಧ್ಯೆ ವಾಲ್ಮೀಕಿ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್‌ ಮಾಡಲಾಗಿದೆ. ವಿಮಾನದಲ್ಲಿ ಪರಿಶೀಲನೆ ಬಳಿಕ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆ ಹುಸಿಬಾಂಬ್‌ ಎಂದು ಅಯೋಧ್ಯೆ ಏರ್‌ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್​ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿಂದ ಅಯೋಧ್ಯೆಗೆ 173 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಕಾಶ ಏರ್‌ಲೈನ್ಸ್​ಗೆ ಹುಸಿಬಾಂಬ್​ ಬೆದರಿಕೆ ಬಂದಿದೆ. ತಕ್ಷಣ ತುರ್ತು ಭೂಸ್ಪರ್ಶ ಮಾಡಿ ಒಟ್ಟು ಪ್ರಯಾಣಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಲಾಗಿದೆ.

ಅಯೋಧ್ಯೆ ಏರ್‌ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್​ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಬೆಂಗಳೂರು ಟು ಅಯೋಧ್ಯೆ ನಡುವೆ ಸಂಚರಿಸುವ ಆಕಾಶ ಏರ್‌ಲೈನ್ಸ್​ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಭಾನುವಾರ ಮಧ್ಯಾಹ್ನ 1:30ರ ಸುಮಾರಿಗೆ ಬಾಂಬ್ ಬೆದರಿಕೆ ಕರೆ ಮಾಹಿತಿ ಬಂದ ತಕ್ಷಣ ಎಮರ್ಜೆನ್ಸಿ ಲ್ಯಾಂಡಿಂಗ್​ಗೆ ಆದೇಶಿಸಲಾಯಿತು ಎಂದಿದ್ದಾರೆ.

ವಿಮಾನ ಭೂಸ್ಪರ್ಶ ಮಾಡುತ್ತಿದ್ದಂತೆ ಪ್ರಯಾಣಿಕರ ಲಗೇಜ್ ಮತ್ತು ವಿಮಾನವನ್ನು ಕೂಲಂಕಷವಾಗಿ ಪರಿಶೀಲನೆ ಮಾಡಿದ್ದು, ಯಾವುದೇ ರೀತಿಯ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಅದೊಂದು ಹುಸಿಬಾಂಬ್​ ಬೆದರಿಕೆ ಆಗಿದೆ.

ವಿಮಾನದಲ್ಲಿ 173 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸದ್ಯ ಎಲ್ಲಾ ಪ್ರಯಾಣಿಕರು ಈಗ ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular