Friday, April 11, 2025
Google search engine

Homeರಾಜ್ಯಸುದ್ದಿಜಾಲಶಾಲೆಗಳಿಗೆ ಬಾಂಬ್ ಬೆದರಿಕೆ: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ– ಸಚಿವ ಮಧು ಬಂಗಾರಪ್ಪ

ಶಾಲೆಗಳಿಗೆ ಬಾಂಬ್ ಬೆದರಿಕೆ: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ– ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ‘ಬೆಂಗಳೂರಿನ ಕೆಲವು ಶಾಲೆಗಳಿಗೆ ಬಂದಿರುವ ಬಾಂಬ್ ಬೆದರಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮಗೆ ಮಕ್ಕಳ ಸುರಕ್ಷತೆ ಮುಖ್ಯ. ಹೀಗಾಗಿ ಬೆದರಿಕೆ ಸಂದೇಶವನ್ನು ನಿರ್ಲಕ್ಷಿಸಿಲ್ಲ. ನಾನು ಬೆಂಗಳೂರು ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇನೆ. ಮಾಹಿತಿ ಪಡೆದಿದ್ದೇನೆ’ ಎಂದರು.

‘ಈ ಹಿಂದೆ ಯಾವುದೋ ಒಂದು ಶಾಲೆಗೆ ಬೆದರಿಕೆ ಕರೆ ಇಲ್ಲವೇ ಸಂದೇಶ ಬರುತ್ತಿತ್ತು. ಈಗ ಒಂದೇ ಬಾರಿ ಹಲವು ಶಾಲೆಗಳಿಗೆ ಸಂದೇಶ ಕಳುಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಈ ಹಂತದಲ್ಲಿ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ಆಗುವುದಿಲ್ಲ. ಶೀಘ್ರ ಆರೋಪಿಗಳನ್ನು ಪೊಲೀಸರು ಬಂಧಿಸಲಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

RELATED ARTICLES
- Advertisment -
Google search engine

Most Popular