ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜನೆ
ಮೈಸೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 18 ಹಾಗೂ 19ರಂದು ಬ್ರಾಹ್ಮಣ ಮಹಾ ಸಮ್ಮೇಳನ ಜರಗಲಿದ್ದು ಮೈಸೂರು ಜಿಲ್ಲೆಯಿಂದ ಸುಮಾರು 5000 ಮಂದಿ ಭಾಗವಹಿಸಲಿದ್ದಾರೆ ಎಂದು ಮಾಜಿನಗರ ಪಾಲಿಕ ಸದಸ್ಯರಾದ ಮಾ ವಿ ರಾಮ್ ಪ್ರಸಾದ್ ಹೇಳಿದರು.
ನಗರದ ಕಾಳಿದಾಸ ರಸ್ತೆಯಲ್ಲಿರುವ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಅರ್ಚಕರು ಹಾಗೂ ಪುರೋಹಿತರಿಗೆ ಸಮಾವೇಶದ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿ
ಮಾತನಾಡಿದ ಅವರು ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯ 25 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇದೆ. ಬುದ್ದಿವಂತ, ವಿದ್ಯಾವಂತ ಸಮಾಜ ಎಂದು ಗುರುತಿಸಿಕೊಂಡಿದ್ದರು ಸಾಕಷ್ಟು ಸಂಕಷ್ಟಗಳು ಎದುರಿಸುತ್ತಿದ್ದಾರೆ. ಶಿಕ್ಷಣದಲ್ಲಿ ಉನ್ನತ ವ್ಯಾಸಂಗ ಪಡೆಯಲು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಮತ್ತು ಸಮರ್ಪಕ ಉದ್ಯೋಗ ಸಿಗುತ್ತಿಲ್ಲ ಹಾಗೂ ಅರ್ಚಕರು, ಅಡುಗೆ ಕೆಲಸ ಮಾಡುವವರ ಸ್ಥಿತಿ ಶೋಚನಿಯವಾಗಿದೆ.
ಬ್ರಾಹ್ಮಣರು ಸಂಘಟಿತರಾಗಬೇಕು, ನಮ್ಮ ಹಕ್ಕು ಹೋರಾಟಗಳಿಗೆ ನಾವೆಲ್ಲರು ಒಂದೇ ಎಂದು ಮುಂದೆ ಸಾಗಬೇಕು ಆಗ ಮಾತ್ರ ಬ್ರಾಹ್ಮಣ ಸಮುದಾಯ ಅಭಿವೃದ್ಧಿ ಸಾಧ್ಯ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ 50ವರ್ಷ ತುಂಬಿದ ಶುಭಾ ಸಂದರ್ಭದಲ್ಲಿ ಸುವರ್ಣ ಸಂಭ್ರಮ ಮತ್ತು ಮಹಾಸಮ್ಮೇಳನವನ್ನು ಜನವರಿ 18,19ನೇ ತಾರೀಖು ಎರಡು ದಿನಗಳ ಮಹಾ ಸಮಾವೇಶವನ್ನು ಅರಮನೆ ಮೈದಾನ ತ್ರಿಪುರವಾಸಿನಿ ಸಭಾಂಗಣದಲ್ಲಿ ಆಯೋಜಿಸಿದ್ದಾರೆ. ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದವರು ಭಾಗವಹಿಸಿ ಯಶ್ವಸಿಗೊಳಿಸಬೇಕಾಗಿ ವಿನಂತಿ, ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗೆ ಸಂಘಟಿತರಾಗಿ ಹೋರಾಟ ಮಾಡೋಣ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಯೋಗ ನರಸಿಂಹ (ಮುರಳಿ), ಮಾಜಿ ನಗರಪಾಲಿಕ ಸದಸ್ಯರಾದ ಎಂಡಿ ಪಾರ್ಥಸಾರಥಿ,
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಮಿರ್ಲೆ ಪನಿಷ್, ಸುಚಿಂದ್ರ, ದೇವಸ್ಥಾನದ ಪ್ರದನ ಅರ್ಚಕರಾದ ವಿಜಯ ರಾಘವನ್, ರಾಘವ, ಸುಬ್ಬಣ್ಣ, ಸೂರ್ಯನಾರಾಯಣ ಭಟ್, ಕಣ್ಣನ್, ಪ್ರಸನ್ನ, ಆನಂದ್, ಹಾಗೂ ವಿಪ್ರ ಮಹಿಳಾ ಸಂಘಟಕರು ಹಾಜರಿದ್ದರು.