Sunday, April 20, 2025
Google search engine

Homeಅಪರಾಧಬೆಂಗಳೂರಿನ ಸಿಂಗಹಳ್ಳಿ ಶೆಡ್‌ನಲ್ಲಿ ಇಬ್ಬರು ವ್ಯಕ್ತಿಗಳ ಬರ್ಬರ ಹತ್ಯೆ: ಆರೋಪಿ ಬಂಧನ

ಬೆಂಗಳೂರಿನ ಸಿಂಗಹಳ್ಳಿ ಶೆಡ್‌ನಲ್ಲಿ ಇಬ್ಬರು ವ್ಯಕ್ತಿಗಳ ಬರ್ಬರ ಹತ್ಯೆ: ಆರೋಪಿ ಬಂಧನ

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಸಿಂಗಹಳ್ಳಿ ಶೆಡ್ ವೊಂದರಲ್ಲಿ ಇಬ್ಬರು ವ್ಯಕ್ತಿಗಳ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಸುರೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಸಿಂಗಹಳ್ಳಿ ಗ್ರಾಮದ ಬಳಿ ಇಬ್ಬರು ವ್ಯಕ್ತಿಗಳ ಹತ್ಯೆ ನಡೆದಿದೆ. ಎಸ್ ಆರ್ ಎಸ್ ಟ್ರಾವೆಲ್ಸ್ ಪಾರ್ಕಿಂಗ್ ಮಾಡುವ ಜಾಗದಲ್ಲಿ ಇಬ್ಬರು ವ್ಯಕ್ತಿಗಳ ಶವ ಪತ್ತೆಯಾಗಿತ್ತು. ಘಟನೆ ಸಂಬಂಧ ತನಿಖೆ ನಡೆಸಿದ ಬಾಗಲೂರು ಠಾಣೆಯ ಪೊಲೀಸರು ಇದೀಗ ಆರೋಪಿ ಸುರೇಶ್ ನನ್ನು ಬಂಧಿಸಿದ್ದಾರೆ.

ನಾಗೇಶ್ (೫೫) ಹಾಗೂ ಮಂಜುನಾಥ್ (೫೦) ಕೊಲೆಯಾದವರು. ಬಸ್ ಸರ್ವಿಸ್ ಶೆಡ್ ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಸುರೇಶ್ ನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular