Friday, June 6, 2025
Google search engine

Homeರಾಜ್ಯಜೂನ್​ 19 ರಂದು ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ

ಜೂನ್​ 19 ರಂದು ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದಲ್ಲಿ ಜೂನ್​ 19 ರಂದು ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉನ್ನತ ಶಿಕ್ಷಣ ಖಾತೆ ಸಚಿವ ಡಾ. ಎಂ.ಸಿ.ಸುಧಾಕರ್​ಗೆ ತಿಳಿಸಿದ್ದು, ಗಿರಿಧಾಮದಲ್ಲಿ ಬರದ ಸಿದ್ದತೆಗಳು ನಡೆಯುತ್ತಿವೆ.

ನಂದಿ ಗಿರಿಧಾಮದ ಸುತ್ತಮುತ್ತ ಭೌಗೋಳಿಕ ವಿಸ್ತೀರ್ಣ ಹಂಚಿಕೊಂಡಿರುವ ಬಯಲುಸೀಮೆಯ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಸಚಿವ ಸಂಪುಟ ಸಭೆ ವರದಾನವಾಗುವ ನಿರೀಕ್ಷೆಯಿದೆ.

ತ್ರಿವಳಿ ಜಿಲ್ಲೆಗಳ ಸಮಸ್ಯೆಗಳು, ಮೂಲಭೂತ ಸಮಸ್ಯೆಗಳು, ವಿಶೇಷ ಪ್ಯಾಕೇಜ್‍ಗಳನ್ನು ಘೋಷಣೆ ಮಾಡುವ ನಿರೀಕ್ಷೆಯಿದೆ. ಮೂರು ಜಿಲ್ಲೆಗಳ ಶಾಸಕರು, ತಮ್ಮ-ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಕ್ಷೇತ್ರಗಳ ಬಗ್ಗೆ ಪಟ್ಟಿ ತಯಾರಿ ಮಾಡಿಕೊಂಡು ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಸನ್ನದ್ಧರಾಗಿದ್ದಾರೆ.

1986ರಲ್ಲಿ ನಂದಿ ಗಿರಿಧಾಮದಲ್ಲಿ ಎರಡನೇ ಸಾರ್ಕ್ ಶೃಂಗ ಸಮ್ಮೇಳನ ನಡೆದಿತ್ತು. ಮಹಾತ್ಮ ಗಾಂಧಿಜಿ, ಜವಾಹರಲಾಲ್ ನೆಹರು ಸೇರಿದಂತೆ ವಿಶ್ವದ ಖ್ಯಾತನಾಮರು ನಂದಿ ಗಿರಿಧಾಮದ ಪ್ರಕೃತಿಗೆ ಮನಸೋತಿದ್ದರು. ಈಗ ಸ್ವತಃ ರಾಜ್ಯ ಸರ್ಕಾರ ನಂದಿ ಗಿರಿಧಾಮದ ಪ್ರಕೃತಿ ಸೊಬಗಿನತ್ತ ಚಿತ್ತಹರಿಸಿದ್ದು, ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಿರುವುದು ಸ್ಥಳೀಯರ ಸಂತಸಕ್ಕೆ ಕಾರಣವಾಗಿದೆ.

RELATED ARTICLES
- Advertisment -
Google search engine

Most Popular