ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ತೇರದಾಳ ಮತಕ್ಷೇತ್ರದ ಮಹಾಲಿಂಗಪುರ ಬಸವನಗರ ಫ್ಲಾಟ್ ನಲ್ಲಿ ಕಾಲುವೆ ಬಂದ್ ಆದ ಪರಿಣಾಮ ಕೆಲವೊಂದು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ಇದರಿಂದ ಫ್ಲಾಟ್ ನ ನಿವಾಸಿಗಳು ಹಾಗೂ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಯಿತು.
ಈ ಸಮಸ್ಯೆ ತಿಳಿದು ಸ್ಥಳಕ್ಕೆ ಆಗಮಿಸಿದ ತೇರದಾಳ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದು ಕೊಣ್ಣೂರ ಪರಿಶೀಲನೆ ನಡೆಸಿದರು. ನಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಸ್ಯೆ ಪರಿಹರಿಸಲು ಸೂಚಿಸಿದರು.