Friday, April 18, 2025
Google search engine

Homeಅಪರಾಧರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ: ವ್ಯಕ್ತಿ ಸಾವು

ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ: ವ್ಯಕ್ತಿ ಸಾವು

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ವೇಗವಾಗಿ ಬಂದ ಕಾರು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇನ್ನು ಕಾರು ಡಿಕ್ಕಿಯಾಗುತ್ತಿದ್ದಂತೆ ರಸ್ತೆಯ ಮದ್ಯ ಭಾಗಕ್ಕೆ ಬಿದ್ದ ಮೃತ ದೇಹದ ಮೇಲೆ ವೇಗವಾಗಿ ಬರುತ್ತಿದ್ದ ಮುರ್ನಾಲ್ಕು ವಾಹನಗಳು ಹರಿದು ಹೋದ ಪರಿಣಾಮ ಮೃತ ದೇಹ ಛಿದ್ರಗೊಂಡಿದೆ.

ಇದರಿಂದ ಮೃತನ ಗುರುತು ಕೂಡ ಪತ್ತೆಯಾಗಿಲ್ಲ. ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular