Friday, April 18, 2025
Google search engine

Homeಅಪರಾಧಕಾರು ಡಿಕ್ಕಿ: ಸ್ಕೂಟರ್ ಸವಾರ ಸಾವು

ಕಾರು ಡಿಕ್ಕಿ: ಸ್ಕೂಟರ್ ಸವಾರ ಸಾವು

ಮೈಸೂರು: ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ತೀವ್ರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ನರಸೀಪುರ ರಸ್ತೆಯ ರಿಂಗ್ ರೋಡ್ ಜಂಕ್ಷನ್‌ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಹನೂರಿನ ವಿನೋದ್(38) ಮೃತಪಟ್ಟ ಸ್ಕೂಟರ್ ಸವಾರ.
ಹನೂರು ತಾಲೂಕು ಉದಯವಾಣಿ ವರದಿಗಾರರಾಗಿದ್ದ ವಿನೋದ್ ಅವರು ಭಾನುವಾರ ರಾತ್ರಿ 7.30ರ ವೇಳೆ ಸ್ಕೂಟರ್‌ನಲ್ಲಿ ರಿಂಗ್ ರಸ್ತೆಯಿಂದ ನಗರದ ಕಡೆ ತಿರುವು ಪಡೆಯುತ್ತಿದ್ದಾಗ ಎದುರಿಗೆ ಬಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಸಿದ್ದಾರ್ಥ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular