ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈಗೆ ಮುಂದೂಡಿದೆ.
ಸಿಬಿಐ ಪರ ವಾದ ಮಂಡಿಸಿದ ಎಎಸ್ಜಿ ಎಸ್.ವಿ. ರಾಜು ಅವರು, ಡಿಸಿಎಂ ಡಿಕೆ ಶಿವಕುಮಾರ್ ರಾಜಕೀಯವಾಗಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟದ ಭಾಗವಾಗಿದ್ದಾರೆ. ಭ್ರಷ್ಟಾಚಾರ ಪ್ರಕರಣ ಹೊರ ಬಿದ್ದಿದೆ. ಅಧಿಕಾರದ ದುರುಪಯೋಗ ಇಲ್ಲಿ ಒಂದು ಸಮಸ್ಯೆಯಾಗಿದೆ ಎಂದರು.
ಡಿಕೆ ಶಿವಕುಮಾರ್ ಪರ ವಾದ ಮಂಡಿಸಿದ ವಕೀಲ ಅಭಿಷೇಕ್ ಮನು ಸಿಂಘ್ವಿ, ಈ ವಿಷಯ ನ್ಯಾಯಾಲಯ ವ್ಯಾಪ್ತಿಗೆ ಒಳಪಟ್ಟಿದೆ. ರಿಟ್ ಅರ್ಜಿ ಉಳಿಸಬಾರದು ಎಂದು ವಾದಿಸಿ, ವಿಚಾರಣೆಯನ್ನು ಮುಂದೂಡಬೇಕು ಎಂದು ಮನವಿ ಮಾಡಿದರು.
ಅರ್ಜಿಯಲ್ಲಿ, ಡಿಕೆ ಶಿವಕುಮಾರ್ ವಿರುದ್ಧದ ಎಫ್ಐಆರ್ ಹಿಂತೆಗೆದುಕೊಂಡು, ತನಿಖೆಗೆ ನೀಡಿದ ಒಪ್ಪಿಗೆಯನ್ನೂ ಹಿಂಪಡೆಯಲಾಗಿದೆ ಎಂಬುದನ್ನು ಪ್ರಶ್ನಿಸಲಾಗಿದೆ. ನ್ಯಾಯಾಧೀಶರು ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈಗೆ ಮುಂದೂಡಿದರು.