Sunday, April 20, 2025
Google search engine

Homeರಾಜ್ಯಜಾತಿ ಜನಗಣತಿ ವರದಿಯನ್ನು ತಿರಸ್ಕರಿಸಿ ಮತ್ತೊಮ್ಮೆ ಗಣತಿ ನಡೆಸಬೇಕು: ವಿ. ಸೋಮಣ್ಣ ಒತ್ತಾಯ

ಜಾತಿ ಜನಗಣತಿ ವರದಿಯನ್ನು ತಿರಸ್ಕರಿಸಿ ಮತ್ತೊಮ್ಮೆ ಗಣತಿ ನಡೆಸಬೇಕು: ವಿ. ಸೋಮಣ್ಣ ಒತ್ತಾಯ

ತುಮಕೂರು: ಅವೈಜ್ಞಾನಿಕವಾಗಿ ಸಿದ್ಧಪಡಿಸಿರುವ ಸಾಮಾಜಿಕ ಹಾಗೂ ಶೈ ಕ್ಷಣಿಕ ಗಣತಿ (ಜಾತಿ ಜನಗಣತಿ) ವರದಿಯನ್ನು ತಿರಸ್ಕರಿಸಿ ಮತ್ತೊಮ್ಮೆ ಗಣತಿ ನಡೆಸಬೇಕು ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಒತ್ತಾಯಿಸಿದರು.

ಕಚೇರಿಯಲ್ಲಿ ಇಂದು ಗುರುವಾರ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜಾತಿ ಜನಗಣತಿಗೆ ಕಾಂಗ್ರೆಸ್ನಲ್ಲೇ ವಿರೋಧವ್ಯಕ್ತವಾಗಿದ್ದು, ಯಾವುದೇ ಜಾತಿ, ಸಮುದಾಯಕ್ಕೂ ಅನ್ಯಾಯವಾಗಬಾರದು. ಮತ್ತೊಮ್ಮೆ ವೈಜ್ಞಾನಿಕವಾಗಿ ಗಣತಿ ನಡೆಸಬೇಕು ಎಂದು ಒತ್ತಾಯಿಸಿದರು.

ಜಾತಿ ಜನಗಣತಿ ವರದಿ ಸಿದ್ಧಪಡಿಸಲು ಈಗಾಗಲೇ ನೂರಾರು ಕೋಟಿ ಹಣ ವೆಚ್ಚ ಮಾಡಲಾಗಿದೆ. ಮತ್ತೊಮ್ಮೆ ಅಷ್ಟೊಂದು ಹಣ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ.ಯಾವುದಕ್ಕೂ ಇಂತಹ ನೂರಾರು ಕೋ ಟಿ ಹಣ ಖರ್ಚು ಮಾಡಿಲ್ಲವೇ ಎಂದು ಪ್ರಶ್ನಿಸಿದರು.

ರೈಲ್ವೆ ಇಲಾಖೆ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲೇ ಬರೆಯಲು ನಾನು ಸಚಿವನಾದ ನಂತರ ಅವಕಾಶಮಾಡಿಕೊಟ್ಟಿದ್ದೇನೆ. ಇದರಿಂದ ಕನ್ನಡಿಗರಿಗೆ ಉದ್ಯೋಗ ಪಡೆದುಕೊಳ್ಳಲು ನೆರವಾಗಲಿದೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular