Thursday, April 3, 2025
Google search engine

Homeಸ್ಥಳೀಯಪುನೀತ್ ಜನ್ಮದಿನವನ್ನು ‘ಸ್ಫೂರ್ತಿದಿನ’ ಎಂದು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ: ಹರೀಶ್ ಗೌಡ

ಪುನೀತ್ ಜನ್ಮದಿನವನ್ನು ‘ಸ್ಫೂರ್ತಿದಿನ’ ಎಂದು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ: ಹರೀಶ್ ಗೌಡ

ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ಅಂಗವಾಗಿ ದೇವರಾಜ ಅರಸು ರಸ್ತೆಯಲ್ಲಿ ಗೀ ರೈಸ್, ಚಿಕನ್ ಚಾಪ್ಸ್ ವಿತರಣೆ

ಮೈಸೂರು: ದೇವರಾಜ ಅರಸು ರಸ್ತೆಯಲ್ಲಿ ಪುನೀತ್ ರಾಜಕುಮಾರ್ 50ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ದೇವರಾಜ ಮೊಹಲ್ಲಾ ಯುವಕರ ಬಳಗದ ವತಿಯಿಂದ ಸಾರ್ವಜನಿಕರಿಗೆ ಗೀ ರೈಸ್ ಹಾಗೂ ಚಿಕನ್ ಚಾಪ್ಸ್ ವನ್ನು ಶಾಸಕರಾದ ಹರೀಶ್ ಗೌಡ ರವರು ಸಾರ್ವಜನಿಕರಿಗೆ ವಿತರಿಸುವ ಮೂಲಕ ಚಾಲನೆ ನೀಡಿದರು.

ಅದಕ್ಕೂ ಮುನ್ನ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಶಾಸಕ ಹರೀಶ್ ಗೌಡ ರವರು ಪುನೀತ್ ಸಾವಿಗೂ ಮೊದಲು ರಾಜ್ಯದ ಬಹಳಷ್ಟು ಜನತೆಗೆ ಅವರು ಮಾಡಿದ್ದ ಸಾಮಾಜಿಕ ಸೇವೆ ಗೊತ್ತಿರಲಿಲ್ಲ. ಬಲಗೈಯಲ್ಲಿ ಮಾಡಿದ ದಾನ ಎಡಗೈಗೆ ತಿಳಿಯಬಾರದು ಎಂಬ ರೀತಿಯಲ್ಲಿ ಅಸಹಾಯಕರ ನೆರವಿಗೆ ನಿಂತಿದ್ದರು. ಚಿತ್ರಗಳು ಹಾಗೂ ಸಾಮಾಜಿಕ ಸೇವೆ ಮೂಲಕ ಮುಗಿಲೆತ್ತ ರಕ್ಕೆ ಬೆಳೆದು ನಿಂತಿದ್ದರು. ಪುನೀತ್ ಜನ್ಮದಿನವನ್ನು ‘ಸ್ಫೂರ್ತಿದಿನ’ ಎಂದು ಆಚರಿಸುತ್ತಿರುವುದು ಅರ್ಥಪೂರ್ಣವಾ ಗಿದೆ’ ಎಂದರು.

ಈ ಸಂದರ್ಭದಲ್ಲಿ ಡಿವೈಎಸ್ಪಿಮಲ್ಲೇಶ್, ಮಾಜಿ ಮೂಡ ಸದಸ್ಯರಾದ ನವೀನ್ ಕುಮಾರ್, ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್, ವೀರಭದ್ರಪ್ಪ, ನಿತಿನ್ ಗುರುರಾಜ್ ,ಪ್ರಮೋದ ರವಿಚಂದ್ರನ್, ಹರ್ಷ ನವೀನ್ ,ನಂಜುಂಡಿ, ಮಂಜುನಾಥ್, ರಾಜು, ರಾಹುಲ್, ಕುಮಾರ್ ಶ್ರೀನಿವಾಸ್ ಮುಂತಾದರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular