ಬೆಂಗಳೂರು: ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಮಧ್ಯಂತರ ಬಜೆಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬಜೆಟ್ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಇದೊಂದು ನಿರಾಶಾದಾಯಕ, ಎಲೆಕ್ಷನ್ ಬಜೆಟ್ ಆಗಿದೆ
. ಬಜೆಟ್ ಬಗ್ಗೆ ಮಾತನಾಡುವಂತಹದ್ದು ಏನೂ ಇಲ್ಲ.ಇದೊಂದು ಬಹಳ ಚರ್ಚೆ ಮಾಡುವ ಬಜೆಟ್ ಅಲ್ಲ ಎಂದು ಹೇಳಿದರು. 2024-25ನೇ ವರ್ಷದ ಮಧ್ಯಂತರ ಬಜೆಟ್ ಮುಗಿಸಿದ್ದಾರೆ. ಚುನಾವಣೆ ಇರೋದರಿಂದ ಪೂರ್ಣ ಬಜೆಟ್ ಘೋಷಣೆ ಆಗದಿರಬಹುದು. ಇಂದು 47,65,768 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.