ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಮೀಣ್ಯಂ ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ಹುಲಿಗಳಿಗೆ ವಿಷ ಪ್ರಾಶನ ಮಾಡಿರುವುದು ಪತ್ತೆಯಾಗಿದೆ. ಹಸುಗಳಿಗೆ ವಿಷ ಪ್ರಾಶನ ಮಾಡಿದ್ದು ಬಳಿಕ ಅದನ್ನು ತಿಂದ ಹುಲಿಗಳು ಸಾವನ್ನಪ್ಪಿವೆ ಎಂದು ಉಪ ಸಂರಕ್ಷಣಾಧಿಕಾರಿ ಹೇಳಿಕೆ ನೀಡಿದ್ದಾರೆ.
ತಾಯಿ ಹುಲಿಗೆ 8 ವರ್ಷ ಆಗಿದ್ದರೆ ಮರಿ ಹುಲಿಗಳಿಗೆ 10 ತಿಂಗಳು ಆಗಿತ್ತು. ಹಸುವಿನಲ್ಲಿರುವ ವಿಷದ ಮಾಂಸ ತಿಂದು ಹುಲಿಗಳು ಮೃತ ಪಟ್ಟಿದೆ. ಯಾವ ಪ್ರಮಾಣದ ವಿಷ? ಹುಲಿ ಭೇಟೆಯಾಡಿದ ಮೇಲೆ ಹಸುವಿಗೆ ವಿಷ ಹಾಕಲಾಗಿದ್ಯಾ? ಅಥವಾ ಮೊದಲೇ ಹಸುವಿಗೆ ವಿಷ ಪ್ರಾಷನ ಮಾಡಲಾಗಿತ್ತಾ ಎಂಬುದು ಲ್ಯಾಬ್ ವರದಿ ಮೂಲಕ ಗೊತ್ತಾಗಲಿದೆ ಎಂದು ತಿಳಿಸಿದರು.
ಹುಲಿ ಹಸುವಿನ ಹಿಂಬಂದಿಯಿಂದ ದಾಳಿ ಮಾಡಿದೆ. ಹುಲಿ ಮತ್ತು ಹಸುವಿನ ಎಲ್ಲಾ ಅಂಗಾಂಗಳನ್ನ ಲ್ಯಾಬ್ ಕಳುಹಿಸಲಾಗಿದೆ. ಮೂರು ದಿನದ ಹಿಂದೆ ಹುಲಿ ಸಾವನ್ನಪ್ಪಿದ್ದು ಇದಕ್ಕೆ ಯಾರು ಹೊಣೆಗಾರರು ಎಂಬುದನ್ನ ಇಲಾಖಾ ಮಟ್ಟದಲ್ಲಿ ತನಿಖೆ ಮಾಡುತ್ತೇವೆ ಎಂದರು. ಹಸು ಯಾರದ್ದು ಎಂಬುದರ ಬಗ್ಗೆಯೂ ತನಿಖೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.