Saturday, April 19, 2025
Google search engine

Homeಅಪರಾಧಚಾಮರಾಜನಗರ: ಸಿನಿಮಾ ಶೈಲಿಯಲ್ಲಿ ರಕ್ತ ಚಂದನ ಸಾಗಾಣೆ- ಆರೋಪಿಗಳ ಬಂಧನ, 50 ಕೆಜಿ ರಕ್ತ ಚಂದನದ...

ಚಾಮರಾಜನಗರ: ಸಿನಿಮಾ ಶೈಲಿಯಲ್ಲಿ ರಕ್ತ ಚಂದನ ಸಾಗಾಣೆ- ಆರೋಪಿಗಳ ಬಂಧನ, 50 ಕೆಜಿ ರಕ್ತ ಚಂದನದ ತುಂಡುಗಳ ವಶ

ಚಾಮರಾಜನಗರ: ಸಿನಿಮಾ ಶೈಲಿಯಲ್ಲಿ ರಕ್ತ ಚಂದನ ಸಾಗಿಸುತ್ತಿದ್ದ ಘಟನೆ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ ಲಕ್ಕೂರು ಬಳಿ ನಡೆದಿದೆ.

ಬೆಂಗಳೂರು ಮೂಲದ ರವಿ(47), ಚಾಮರಾಜನಗರದ ಸರಗೂರು ಮೋಳೆಯ ಎಸ್ ಎಂ ಗೋವಿಂದರಾಜು(43), ಆನಂದ್(40), ಸಿ ಎಸ್ ಆಸ್ಕರ್ ಪಾಷ(63), ಮಹೇಂದ್ರ(32) ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳು ಮಹೇಂದ್ರ ಬೊಲೆರೋ ಪಿಕಪ್ ವಾಹನದಲ್ಲಿ ಮೇಲೆ ಹೂಕೋಸುಗಳನ್ನು ತುಂಬಿಕೊಂಡು ಅವುಗಳ ಮಧ್ಯೆ ಅಕ್ರಮವಾಗಿ ರಕ್ತ ಚಂದನ ಮರದ ತುಂಡುಗಳನ್ನು ಸಾಗಾಣಿಕೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಂಡೀಪುರದ ಅರಣ್ಯ ಇಲಾಖೆಯ ಮೂರು ತಂಡಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸಂಬಂಧ ಗುಂಡ್ಲುಪೇಟೆ ಬಫರ್ ಜೇನ್ ವಲಯದಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತರಿಂದ ಬೊಲೆರೊ ವಾಹನ ಸೇರಿದಂತೆ 50 ಕೆಜಿಯಷ್ಟು ರಕ್ತಚಂದನದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

RELATED ARTICLES
- Advertisment -
Google search engine

Most Popular