ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗುರುವಾರ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದರು. ಈ ವೇಳೆ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ನಿರ್ಮಲ ಸೀತರಾಮನ್ಗೆ ಮನವಿ ಮಾಡಿದರು.
ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.