Tuesday, April 15, 2025
Google search engine

Homeಅಪರಾಧಚಿಕ್ಕಮಗಳೂರು: ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್; 30 ಮಂದಿಗೆ ಗಾಯ

ಚಿಕ್ಕಮಗಳೂರು: ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್; 30 ಮಂದಿಗೆ ಗಾಯ

ಬಾಳೆಹೊನ್ನೂರು (ಚಿಕ್ಕಮಗಳೂರು): ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮೂರುಗದ್ದೆ ಮತ್ತು ಜಲದುರ್ಗದ ನಡುವೆ ಜಯಪುರ ಬಳಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿ ಬಿದ್ದು 30 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬೆಂಗಳೂರು ಡಿಪೋಗೆ ಸೇರಿದ ಬಸ್‌ನಲ್ಲಿ 45 ಪ್ರಯಾಣಿಕರಿದ್ದರು. ಪುಟ್ಟಪ್ಪ ಪೂಜಾರಿ ಎಂಬವರ ಮನೆಯ ಮೇಲೆ ಬಸ್ ಉರುಳಿ ಬಿದ್ದಿದೆ. ಗಾಯಗೊಂಡ 10 ಮಂದಿಯನ್ನು ಜಯಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಾಲಕ ವೆಂಕಪ್ಪ ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಬಸ್ ಡಿಕ್ಕಿ ಹೊಡೆದ ಮನೆಯ ನಿವಾಸಿ ಶಾಂತಾ ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯ ನಿವಾಸಿಗಳು ಸಹಾಯ ಮಾಡಿದರು.ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.

ಬಸ್ ತುಂಬಾ ಹಳೆಯದಾಗಿದ್ದು, ಉತ್ತಮವಾಗಿ ನಿರ್ವಹಿಸದೇ ಇರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular