Saturday, June 28, 2025
Google search engine

Homeಸ್ಥಳೀಯಪೌರ ಸನ್ಮಾನ ಹಾಗೂ ಡಾ. ಸಾ.ರಾ. ಧನುಷ್ ಅವರಿಗೆ ಅಭಿನಂದನೆ ಕಾರ್ಯಕ್ರಮ: ಜುಲೈ 7ರಂದು ಭವ್ಯ...

ಪೌರ ಸನ್ಮಾನ ಹಾಗೂ ಡಾ. ಸಾ.ರಾ. ಧನುಷ್ ಅವರಿಗೆ ಅಭಿನಂದನೆ ಕಾರ್ಯಕ್ರಮ: ಜುಲೈ 7ರಂದು ಭವ್ಯ ಆಯೋಜನೆ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ : ಜುಲೈ 7 ರಂದು ಸೋಮವಾರ ಪಟ್ಟಣದ ಪಿ.ಎಲ್.ಡಿ.ಬ್ಯಾಂಕ್ ಸಮುದಾಯ ಭವನದಲ್ಲಿ ನಡೆಯಲಿರುವ ಮೈಸೂರು ಮತ್ತು ಕೊಡಗು ಸಂಸದ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ ಅವರ ಪೌರ ಸನ್ಮಾನ ಮತ್ತು ವೈದ್ಯಕೀಯ ಸ್ನಾತಕೋತ್ತರ ಪದವಿಯಲ್ಲಿ ಮೂರನೇ ರ್ಯಾಂಕ್ ಗಳಿಸಿರುವ ಡಾ.ಸಾ.ರಾ.ಧನುಷ್ ಅವರ ಅಭಿನಂದನಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸ ಬೇಕೆಂದು ಜಿ.ಪಂ.ಮಾಜಿ ಉಪಾಧ್ಯಕ್ಷ ಅಡಗೂರು ಚನ್ನಬಸಪ್ಪ ಹೇಳಿದರು.

ಪಟ್ಟಣದ ಹೆಚ್.ಡಿ.ದೇವೇಗೌಡ ಸಮುದಾಯದ ಭವನದಲ್ಲಿ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕಿನ ನಾಗರೀಕ ವೇದಿಕೆ ವತಿಯಿಂದ ನಡೆದ ಪೌರ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಪಟ್ಟಣದ ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ವಂಶ್ ಕುಡಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಕ್ಷೇತ್ರದ ಅಭಿವೃದ್ಧಿಗೆ ಕಳೆದ ಹದಿನೈದು ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದು ಅವರ ಪುತ್ರನಿಗೆ ಕ್ಷೇತ್ರದ ಜನರು ಆರ್ಶೀವಾದ ಮಾಡಿ ಹರಸ ಬೇಕು ಎಂದು ಮನವಿ ಮಾಡಿದರು.

ವೈದ್ಯಕೀಯ ಡಾ.ಸಾ.ರಾ.ಧನುಷ್ ಅವರು ಅಪಾರ ಸಾಧನೆ ಮಾಡಿದ್ದು ಇದರೊಂದಿಗೆ ರಾಜ್ಯಕ್ಕೆ ಸ್ನಾತಕೋತ್ತರ ಪದವಿಯಲ್ಲಿ ಮೂರನೇ ರ್ಯಾಂಕ್ ಪಡೆದಿದ್ದು ಹೆಮ್ಮೆಯ ವಿಚಾರ ಎಂದು ಬಣ್ಣಸಿದರಲ್ಲದೆ. ಇವರು ಸಾಧಕರಿಗೆ ಸ್ಪೂರ್ತಿ ಎಂದು ಮೆಚ್ಚುಗೆ ಮಾತುಗಳನ್ನು ಆಡಿದರು.

ಜುಲೈ 7 ಕಾರ್ಯಕ್ರಮ ಲದ ದಿವ್ಯ ಸಾನಿಧ್ಯವನ್ನು ಸುತ್ತೂರು ಮಠಧೀಶರಾದ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ವಹಿಸಲಿದ್ದು ಇವರೊಂದಿಗೆ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಪಾಲ್ಗೊಳಲಿದ್ದು, ಮಾಜಿ ಸಚಿವ ಸಾ.ರಾ.ಮಹೇಶ್ ಉಪ ಸ್ಥಿತರಿರುವರು ಎಂದು ಸಭೆಯಲ್ಲಿ ತಿಳಿಸಿದರು.

ಜಿ.ಪಂ.ಮಾಜಿ ಸದಸ್ಯ ಎಂ.ಟಿ.ಕುಮಾರ್ .ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ, ಮಾತನಾಡಿ‌ ಕಾರ್ಯಕ್ರಮಕ್ಕೆ ಎಲ್ಲರನ್ನು ಆಹ್ವಾನಿಸಿದರು.

ಇದಕ್ಕೂ‌ ಮೊದಲು ನಾಡ ಪಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ತಾಲ್ಲೂಕು ಒಕ್ಕಲಿಗರ ಸಂಘದ ಗೌರವಾಧ್ಯಕ್ಣ ಮಿರ್ಲೆ ಅಣ್ಣೇಗೌಡ, ಅಧ್ಯಕ್ಷ ಶಿವರಾಮ್, ತಾಲ್ಲೂಕು ಜಾದಳ ಅಧ್ಯಕ್ಷರಾದ ಹಂಪಾಪುರ ಕುಮಾರ್, ಮೆಡಿಕಲ್ ರಾಜಣ್ಣ, ತಾ.ಜಾದಳ ವಕ್ತಾರ ಕೆ.ಎಲ್.ರಮೇಶ್, ಜಿಲ್ಲಾ ಗ್ರಾಮಂತರ ಯುವ ಜೆಡಿಎಸ್ ಉಪಾಧ್ಯಕ್ಷ ಕಗ್ಗರೆ ಕುಚೇಲ, ತಾ‌.ಬಿಜೆಪಿ ಅಧ್ಯಕ್ಷ ಸಾ.ರಾ.ತಿಲಕ್, ಜಿ.ಪಂ.ಮಾಜಿ ಸದಸ್ಯರಾದ ಎಂ.ಟಿ.ಕುಮಾರ್, ದಲಿತ ಮುಖಂಡ ಹನಸೋಗೆ ನಾಗರಾಜ್, ಮೈಮುಲ್ ನಿರ್ಧೆಶಕ ಎ.ಟಿ.ಸೋಮಶೇಖರ್, ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ದಾಕ್ಷಾಯಿಣಿ, ನಗರ ಜಾದಳ ಮಹಿಳಾ ಘಟಕದ ಕಾರ್ಯದರ್ಶಿ ಭಾಗ್ಯಮ್ಮ, ಮೋಹನಕುಮಾರಿ, ಅಖಿಲ ಭಾರತ ವೀರಶೈವ ಸಮಾಜದ ಜಿಲಾ ನಿರ್ದೇಶಕಿ ರೂಪಸತೀಶ್, ತಾ.ಪಂ.ಮಾಜಿ ಸದಸ್ಯ ಹಂಗರಬಾಯನಹಳ್ಳಿ ತಮ್ಮಣ್ಣ,‌ಪುರಸಭೆ ಸದಸ್ಯರಾದ ಉಮೇಶ್, ಸಂತೋಷ್ ಗೌಡ, ಮಾಜಿ ಅಧ್ಯಕ್ಷ ಡಿ.ಕಾಂತರಾಜ್, ಜಾದಳ ಮುಖಂಡರಾದ ಬಾಲಾಜಿ ಗಣೇಶ್, ಸಿ.ವಿ.ಗುಡಿ ಸಾಗರ್, ಡಿ.ವಿ.ಗುಡಿ ಯೋಗೇಶ್, ಅನೀಫ್ ಗೌಡ, ಎರೆಮನುಗನಹಳ್ಳಿ ಸುನೀಲ್, ಕಿಶೋರ್, ಸಾತಿಗ್ರಾಮ ಶಂಕರ, ಬೆಣಗನಹಳ್ಳಿ ಕೃಷ್ಣೇಗೌಡ ಇದ್ದರು.

RELATED ARTICLES
- Advertisment -
Google search engine

Most Popular