ಮೈಸೂರು: ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರಕಾರ್ಮಿಕರು ದೇಶದ ಬೆನ್ನೆಲುಬು, ಅವರನ್ನು ಗೌರವಿಸೋಣ ಎಂದು ಮಾಜಿನಗರ ಪಾಲಿಕಾ ಸದಸ್ಯರಾದ ಮಾ ವಿ ರಾಮಪ್ರಸಾದ್ ಹೇಳಿದರು.
ನಗರದ ಚಾಮುಂಡಿಪುರಂ ವೃತ್ತದಲ್ಲಿರುವ ತಗಡೂರು ರಾಮಚಂದ್ರರಾವ್ ಉದ್ಯಾನವನದಲ್ಲಿ ಜನಮನ ವೇದಿಕೆ ವತಿಯಿಂದ ಅನ್ನಪೂರ್ಣ ಐ ಆಸ್ಪತ್ರೆಯ ಸಹಯೋಗದೊಂದಿಗೆ ಮಾಜಿ ನಗರಪಾಲಿಕೆ ಸದಸ್ಯರಾದ ಮಾ ವಿ ರಾಮಪ್ರಸಾದ್ ನೇತೃತ್ವದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ ಪೌರಕಾರ್ಮಿಕರಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ನಗರದಲ್ಲಿ ವಾಹನಗಳು ಮನೆ ಮುಂದೆ ಬರುವಾಗ ಸಾರ್ವಜನಿಕರು ಹಸಿ ಮತ್ತು ಒಣ ಕಸವನ್ನು ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕಿಸಿ, ಕೊಡುವ ಮೂಲಕ ಪೌರಕಾರ್ಮಿಕರೊಂದಿಗೆ ಸಹಕರಿಸಬೇಕು. ಪೌರಕಾರ್ಮಿಕರು ಯಾವುದೇ ಕಾರಣಕ್ಕೂ ಶೌಚ ಗುಂಡಿಗಳಿಗೆ ಇಳಿಯಬಾರದು. ಯಂತ್ರಗಳ ಮೂಲಕ ಸ್ವಚ್ಛಗೊಳಿಸಬೇಕು’ ಎಂದರು.
‘ಪೌರಕಾರ್ಮಿಕರು ದೇವರ ಸಮಾನ. ಅವರು ಇಲ್ಲವೆಂದರೆ ನಗರಗಳಲ್ಲಿ ಸ್ವಚ್ಛತೆಯಿರುವುದಿಲ್ಲ. ಪ್ರತಿಯೊಬ್ಬರೂ ಅವರನ್ನು ಗೌರವದಿಂದ ಕಾಣಬೇಕು ಪ್ರತಿಯೊಬ್ಬರೂ ನಗರದ ಸ್ವಚ್ಛತೆಗೆ ಒತ್ತು ನೀಡಬೇಕು. ಬದುಕಿಗೆ ಕಣ್ಣುಗಳು ಅವಶ್ಯಕವಾಗಿದ್ದು, ಅವುಗಳನ್ನು ಕಾಲ ಕಾಲಕ್ಕೆ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳಬೇಕು. ಜೀವನದ ಎಲ್ಲ ಚಟುವಟಿಕೆಗಳಿಗೆ ಮೂಲ ಕಣ್ಣು. ಆ ಕಣ್ಣಿನ ಬಗ್ಗೆ ಕಾಳಜಿ ವಹಿಸುವುದು ಬಹುಮುಖ್ಯವಾಗಿದೆ. ಹೊರ ಜಗತ್ತನ್ನು ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಕಾಪಾಡಿಕೊಳ್ಳಬೇಕು ಎಂದರು.ಕಣ್ಣಿನ ಉಚಿತ ತಪಾಸಣೆಗೆ ಕರೆತರುವ ಮೂಲಕ ಪೌರ ಕಾರ್ಮಿಕರ ಸೇವೆಗೆ ಜನಮನ ಸಂಸ್ಥೆ ಉತ್ತಮ ಕೆಲಸ ಮಾಡುತ್ತಿದೆ. ಇತಂಹ ಸಮಾಜಮುಖಿ ಕಾರ್ಯ ಮಾಡಲು ಎಲ್ಲರೂ ಬದ್ದರಾಗಿರಬೇಕು ಎಂದು ಹೇಳಿದರು.
ಕಣ್ಣಿನ ತಪಾಸಣೆ 100ಕ್ಕೂ ಹೆಚ್ಚು ಪೌರಕಾರ್ಮಿಕರು ಸದುಪಯೋಗಪಡಿಸಿಕೊಂಡರು.
ಇದೇ ಸಂದರ್ಭದಲ್ಲಿ ಮಾಜಿ ನಗರಪಾಲಿಕೆ ಸದಸ್ಯರಾದ ಮಾ ವಿ ರಾಮಪ್ರಸಾದ್, ಅನ್ನಪೂರ್ಣ ಐ ಆಸ್ಪತ್ರೆಯ ಎಂ ಡಿ ಅಶ್ವತ್ ಕುಮಾರ್, ಶ್ರೀ ದುರ್ಗಾ ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ರೇಣುಕಾ ಹೊರಕೇರಿ, ಅಪೂರ್ವ ಸುರೇಶ್, ಸ್ಥಳೀಯ ಕಾರ್ಯಕರ್ತರದ ಮಂಜುನಾಥ್, ಸೋಮೇಶ್, ಮೋಹನ್, ರವಿ, ರಮೇಶ್, ಮಧು, ಆದರ್ಶ್, ಹಾಗೂ ಇನ್ನಿತರರು ಹಾಜರಿದ್ದರು.