Tuesday, May 6, 2025
Google search engine

Homeಅಪರಾಧಹೊಸ ವರ್ಷಾಚರಣೆ ಬಳಿಕ ಪಾನಮತ್ತ ಸ್ನೇಹಿತರ ನಡುವೆ ಗಲಾಟೆ: ಓರ್ವನ ಹತ್ಯೆ

ಹೊಸ ವರ್ಷಾಚರಣೆ ಬಳಿಕ ಪಾನಮತ್ತ ಸ್ನೇಹಿತರ ನಡುವೆ ಗಲಾಟೆ: ಓರ್ವನ ಹತ್ಯೆ

ಬೆಂಗಳೂರು: ಹೊಸ ವರ್ಷಾಚರಣೆ ಬಳಿಕ ಪಾನಮತ್ತ ಸ್ನೇಹಿತರ ನಡುವೆ ಶುರುವಾದ ಗಲಾಟೆ ವ್ಯಕ್ತಿಯೊಬ್ಬನ ಹತ್ಯೆಯಲ್ಲಿ ಕೊನೆಗೊಂಡ ಘಟನೆ ಹನುಮಂತನಗರ ಠಾಣಾ ವ್ಯಾಪ್ತಿಯ ಶ್ರೀನಿವಾಸ ನಗರ ಬಸ್​ ನಿಲ್ದಾಣದ ಬಳಿ ಕಳೆದ ತಡರಾತ್ರಿ ನಡೆದಿದೆ.

ಮೃತರನ್ನು ವಿಜಯ್​​ (21) ಎಂದು ಗುರುತಿಸಲಾಗಿದೆ.

ವಿಜಯ್​ ಹಾಗೂ ಆತನ ಗೆಳೆಯರು ಹೊಸ ವರ್ಷಾಚರಣೆ ಮಾಡಿದ್ದಾರೆ. ಮನೆಗೆ ತೆರಳುವಾಗ ವಿಜಯ್ ಹಾಗೂ ಆತನ ಗೆಳೆಯರ ನಡುವೆ ಗಲಾಟೆ ಆರಂಭವಾಗಿದೆ. ಆಟೋದಲ್ಲಿ ತೆರಳುತ್ತಿದ್ದಾಗ ಈ ಗಲಾಟೆ ಅತಿರೇಕಕ್ಕೆ ಹೋಗಿದ್ದು, ವಿಜಯ್​ ನ ಎದೆಗೆ ಚಾಕುವಿನಿಂದ ಇರಿಯಲಾಗಿದೆ. ಬಳಿಕ ಶ್ರೀನಿವಾಸನಗರ ಬಸ್​ ನಿಲ್ದಾಣದೆದುರು ಆತನನ್ನು ಆಟೋದಿಂದ ಹೊರತಳ್ಳಿ ಆರೋಪಿಗಳು ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ವಿಜಯ್ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹನುಮಂತನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಿಗೆ ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular