Thursday, April 3, 2025
Google search engine

Homeಅಪರಾಧಕಾನೂನುಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ವಿಚಾರಣೆ ಮಾ.7ಕ್ಕೆ

ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ವಿಚಾರಣೆ ಮಾ.7ಕ್ಕೆ

ಬೆಂಗಳೂರು : ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾರ್ಚ್ 7 ರಂದು ವಿಚಾರಣೆ ಮುಂದೂಡಿತು.

ಈ ವೇಳೆ ಅಂತಿಮ ವರದಿ ಕಾಪಿ ನೀಡಲು ದೂರುದಾರ ಸ್ನೇಹಮಯಿ ಕೃಷ್ಣ ಈ ವೇಳೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ತಕರಾರು ಇದ್ದರೆ ಆಕ್ಷೇಪಣೆ ಸಲ್ಲಿಸುವಂತೆ ಇದೆ ವೇಳೆ ಕೋರ್ಟ್ ಸ್ನೇಹಮಯಿ ಕೃಷ್ಣಗೆ ಕೋರ್ಟ್ ಸೂಚಿಸಿತು. ನಮಗೆ ಲೋಕಾಯುಕ್ತ ತನಿಖೆಯ ಅಂತಿಮ ವರದಿಯ ಕಾಪಿ ನೀಡಿ ನಂತರ ತಕರಾರು ಅರ್ಜಿ ಸಲ್ಲಿಸುವುದಾಗಿ ಸ್ನೇಹಮಯಿ ಕೃಷ್ಣ ತಿಳಿಸಿದರು.

ಈ ವೇಳೆ ಅಂತಿಮ ವರದಿ ನೀಡಲು ಲೋಕಾಯುಕ್ತ ಅಧಿಕಾರಿಗಳಿಗೆ ಜನಪ್ರತಿನಿಧಿಗಳ ಕೋರ್ಟ್ ಸೂಚನೆ ನೀಡಿ, ಮಾರ್ಚ್ 7 ರಂದು ವಿಚಾರಣೆ ಮುಂದೂಡಿ ನ್ಯಾಯಾಲಯ ಆದೇಶ ನೀಡಿತು. ಹಾಗಾಗಿ ಲೋಕಾಯುಕ್ತ ಅಧಿಕಾರಿಗಳು ಇಂದು ಸ್ನೇಹಮಯಿ ಕೃಷ್ಣಗೆ ಅಂತಿಮ ವರದಿಯ ಕಾಪಿ ನೀಡಲಿದ್ದಾರೆ.

RELATED ARTICLES
- Advertisment -
Google search engine

Most Popular