ಬೆಂಗಳೂರು : ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಗುರುವಾರ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ ೨೧೬ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾವುದೇ ಜಾತಿ, ಧರ್ಮ,ಭಾಷೆ, ಪ್ರದೇಶಗಳಿಗೆ ಸೇರಿದ ಎಲ್ಲ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ರವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ.ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ ಎಂದರು.
ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ ೮ ರಿಂದ ೧೯ ವರೆಗೆ ಏರ್ಪಡಿಸಲಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನಸಾಧನೆ, ದೇಶಕ್ಕೆ ನೀಡಿದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಮಹತ್ವದ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಪ್ರದರ್ಶವನ್ನು ಏರ್ಪಡಿಸಲಾಗಿದೆ ಎಂದರು.