Monday, April 7, 2025
Google search engine

Homeರಾಜ್ಯನಟ ಶಿವರಾಜ್ ಕುಮಾರ್ ಮನೆಗೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ

ನಟ ಶಿವರಾಜ್ ಕುಮಾರ್ ಮನೆಗೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು : ಕ್ಯಾನ್ಸರ್  ಗೆದ್ದು ಬೆಂಗಳೂರಿಗೆ ವಾಪಸ್ ಆಗಿರುವ ನಟ ಶಿವರಾಜ್ ಕುಮಾರ್ ಅವರನ್ನು ಇಂದು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಲಿದ್ದಾರೆ. 

ಸದ್ಯ ಕ್ಯಾನ್ಸರ್ ಚಿಕಿತ್ಸೆ ಬಳಿಕ ಬೆಂಗಳೂರಿಗೆ ಆಗಮಿಸಿರುವ ನಟ ಶಿವರಾಜಕುಮಾರ್ ಅವರ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ.

ಕಳೆದ 2024 ಡಿಸೇಂಬರ್ 18ರಂದು ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದ ಶಿವರಾಜ್‌ಕುಮಾರ್ ಅವರಿಗೆ ಚಿಕಿತ್ಸೆ ಯಶಸ್ವಿಯಾಗಿದೆ. ಚಿಕಿತ್ಸೆಯ ನಂತರವೂ ಕೆಲ ದಿನಗಳ ಕಾಲ ಅಮೆರಿಕಾದಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಶಿವಣ್ಣ ಹೆಚ್ಚು ಕಮ್ಮಿ ಒಂದು ತಿಂಗಳ ನಂತರ ಬೆಂಗಳೂರಿಗೆ ಮರಳಿ ಬಂದಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ.

RELATED ARTICLES
- Advertisment -
Google search engine

Most Popular