Tuesday, June 10, 2025
Google search engine

Homeಸ್ಥಳೀಯಸಿಎಂ ಸಿದ್ದರಾಮಯ್ಯ ಯಾವತ್ತೂ ಭ್ರಷ್ಟಾಚಾರ ಮಾಡಿದವರಲ್ಲ: ಸಚಿವ ಡಾ. ಎಚ್ ಸಿ ಮಹದೇವಪ್ಪ

ಸಿಎಂ ಸಿದ್ದರಾಮಯ್ಯ ಯಾವತ್ತೂ ಭ್ರಷ್ಟಾಚಾರ ಮಾಡಿದವರಲ್ಲ: ಸಚಿವ ಡಾ. ಎಚ್ ಸಿ ಮಹದೇವಪ್ಪ

ಮೈಸೂರು : ಸಿಎಂ ಸಿದ್ದರಾಮಯ್ಯ ಯಾವತ್ತೂ ಭ್ರಷ್ಟಾಚಾರ ಮಾಡಿದವರಲ್ಲ. ಸೇಮ ಸಿದ್ದರಾಮಯ್ಯ ಅವರ ಧ್ವನಿ ಅಡಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಊರನ್ನೇ ಲೂಟಿ ಮಾಡಿದವರು ಪ್ರಾಮಾಣಿಕತೆಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ತಾಯೂರು ಗೇಟ್‌ನಲ್ಲಿ ಸಚಿವ ಡಾ. ಎಚ್ ಸಿ ಮಹದೇವಪ್ಪ ಆಕ್ರೋಶ ಹೊರಹಾಕಿದರು.

ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ತಾಯೂರು ಗೇಟ್ ಬಳಿ ಮಾತನಾಡಿದ ಅವರು, ಕೆಲವರು ಸೂರ್ಯನಿಗೆ ಉಗಿಯುವ ಕೆಲಸವನ್ನು ಮಾಡುತ್ತಿದ್ದಾರೆ. ಸೂರ್ಯನಿಗೆ ಉಗುಳು ತಗುವುದಿಲ್ಲ ಸೂರ್ಯನಿಗೆ ಅಪಮಾನ ಮಾಡುವ ಕೆಲಸ ಮಾಡಲಾಗುತ್ತಿದೆ. ಕೆಲವರು ರಾಜ್ಯ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಧ್ವನಿ ಅಡಗಿದರೆ ಶೋಷಿತರ ಧ್ವನಿ ಅಡಗುತ್ತದೆ. ಹೀಗಾಗಿ ಸಿದ್ದರಾಮಯ್ಯ ಧ್ವನಿ ಅಡಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಊರನ್ನೆ ಲೂಟಿ ಮಾಡಿದವರು ಪ್ರಾಮಾಣಿಕತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಇವರಿಗೆ ಯಾವ ನೈತಿಕತೆ ಇದೆ ಹೇಳಿ ಎಂದು ಮಹದೇವಪ್ಪ ಆಕ್ರೋಶ ಹೊರಹಾಕಿದರು.

RELATED ARTICLES
- Advertisment -
Google search engine

Most Popular