Sunday, April 20, 2025
Google search engine

Homeರಾಜ್ಯಜಪ್ತಿಯಾದ ಜಯಲಲಿತಾ ಒಡವೆಯನ್ನು ತ. ಸರ್ಕಾರಕ್ಕೆ‌ ಹಸ್ತಾಂತರಿಸಲು ದಿನಾಂಕ‌ ನಿಗದಿಪಡಿಸಿದ ಕೋರ್ಟ್

ಜಪ್ತಿಯಾದ ಜಯಲಲಿತಾ ಒಡವೆಯನ್ನು ತ. ಸರ್ಕಾರಕ್ಕೆ‌ ಹಸ್ತಾಂತರಿಸಲು ದಿನಾಂಕ‌ ನಿಗದಿಪಡಿಸಿದ ಕೋರ್ಟ್

ಬೆಂಗಳೂರು: ದಿ.ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿಯಾದ ಜಯಲಲಿತಾ ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ‌ ಹಸ್ತಾಂತರಿಸಲು ಕರ್ನಾಟಕ ಹೈಕೋರ್ಟ್​​ ಮಾರ್ಚ್ 6 ಮತ್ತು 7ರಂದು ದಿನಾಂಕ‌ ನಿಗದಿಪಡಿಸಿದೆ. ಒಡವೆ ಸ್ವೀಕರಿಸಲು ತಮಿಳುನಾಡಿನಿಂದ ಇಬ್ಬರು ಅಧಿಕಾರಿಗಳ ನೇಮಕ ಮಾಡಲಾಗಿದೆ. ತಮಿಳುನಾಡು ಗೃಹ ಪ್ರಧಾನ ಕಾರ್ಯದರ್ಶಿ ಮತ್ತು ಐಜಿಪಿ ವಿಜಿಲೆನ್ಸ್ ಹಾಜರಿರಬೇಕು. ಒಡವೆ ತೆಗೆದುಕೊಂಡು ಹೋಗಲು 6 ಟ್ರಂಕ್​ಗಳನ್ನು ತರುವಂತೆ ಕೋರ್ಟ್ ಸೂಚನೆ ನೀಡಿದೆ. ವಿಡಿಯೋಗ್ರಾಫರ್, ಫೋಟೋಗ್ರಾಫರ್, ಎರಡೂ ದಿನಗಳು ಸಿಟಿ ಸಿವಿಲ್ ಕೋರ್ಟ್​ನಲ್ಲಿ ಭದ್ರತೆ ಒದಗಿಸುವಂತೆ ವಿಶೇಷ ನ್ಯಾಯಾಧೀಶ ಮೋಹನ್​ರಿಂದ ಸೂಚನೆ ನೀಡಲಾಗಿದೆ.

ಕರ್ನಾಟಕಕ್ಕೆ ಕೊಡಬೇಕಾದ‌ 5 ಕೋಟಿ ರೂ. ವ್ಯಾಜ್ಯ ಶುಲ್ಕ ಇನ್ನೂ ಪಾವತಿಯಾಗಿಲ್ಲ. ಕೋರ್ಟ್​ಗೆ ಎಸ್​ಪಿಪಿ ಕಿರಣ್ ಜವಳಿ ಮಾಹಿತಿ ನೀಡಿದ್ದು, ಮುಂದಿನ‌ ವಿಚಾರಣೆ ಮಾರ್ಚ್‌ 6ಕ್ಕೆ ನಿಗದಿಪಡಿಸಲಾಗಿದೆ.

1996ರಲ್ಲಿ ಜಯಲಲಿತಾ ಅವರು ಅಕ್ರಮ ಆಸ್ತಿಗಳಿಸಿದ್ದಾರೆಂಬ ಆರೋಪದಲ್ಲಿ ಸಿಬಿಐ ದಾಳಿ ಅಧಿಕಾರಿಗಳು ಮಾಡಿದ್ದರು. 1997ರಲ್ಲಿ ಪ್ರಕರಣದ ಚಾರ್ಜ್‌ಶೀಟ್‌ ಕೂಡ ಸಲ್ಲಿಕೆಯಾಗಿತ್ತು. ಇದರ ವಿಚಾರಣೆ ನಡೆದು ಶಿಕ್ಷೆ ಪ್ರಕಟವಾಗುವ ಮುನ್ನವೇ ಜಯಲಲಿತಾ ಅವರು 2016 ರಲ್ಲಿ‌ ಮೃತಪಟ್ಟಿದ್ದರು.

ಜಯಲಲಿತಾ ಅವರು 1991ರಿಂದ 96 ನಡುವೆ ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿತ್ತು. ಚೆನ್ನೈನಲ್ಲಿ ಐಷಾರಾಮಿ ಬಂಗಲೆಗಳನ್ನು ಹೊಂದಿದ್ದರು, ಹೈದರಾಬಾದ್‌ ಬಳಿ ಫಾರ್ಮ್‌ ಹೌಸ್‌, ತಮಿಳುನಾಡಿನ ನೀಲಗಿರಿ ಪ್ರದೇಶದಲ್ಲಿ ಭಾರಿ ಚಹಾ ತೋಟ, ಬೆಲೆಬಾಳುವ ಆಭರಣ, ಕಾರ್ಖಾನೆಗಳು, ಬ್ಯಾಂಕ್‌ ಖಾತೆಗಳಲ್ಲಿ ಸಂಪತ್ತು ಕ್ರೋಢೀಕರಣ, ಐಷಾರಾಮಿ ಕಾರುಗಳನ್ನು ಹೊಂದಿದ್ದರು.

ಜೆ.ಜಯಲಲಿತಾ ಜತೆ ಸೇರಿ ಅಕ್ರಮ ಆಸ್ತಿ ಸಂಪಾದನೆಗೆ ಶಶಿಕಲಾ ಸಂಚು ನಡೆಸಿದ್ದರು. ಇತರೆ ಅಪರಾಧಿಗಳೊಂದಿಗೆ ಸೇರಿ ಒಳಸಂಚು ನಡೆಸಿದ್ದ ಶಶಿಕಲಾ, ಜಯಾ ಹಣದಿಂದಲೇ ಸಾವಿರಾರು ಎಕರೆ ಭೂಮಿ ಖರೀದಿಸಿದ್ದರು. ವಿವಿಧ ಕಂಪನಿಗಳು, ವೈಯಕ್ತಿಕ ಹೆಸರಿನಲ್ಲಿ ಜಮೀನು ಖರೀದಿಸಿದ್ದರು. ಜಯಲಲಿತಾ ಶಶಿಕಲಾರನ್ನು ಇರಿಸಿಕೊಂಡಿದ್ದಕ್ಕೆ ಕಾರಣವಿಲ್ಲ, ಮಾನವೀಯ ಅಥವಾ ಸಾಮಾಜಿಕ ಕಾರಣವಾಗಲೀ ಇಲ್ಲ. ಜಯಲಲಿತಾ ಆಸ್ತಿ ಹಂಚಿಕೊಳ್ಳಲೆಂದೇ ಇವರೆಲ್ಲರೂ ಜೊತೆಯಲ್ಲಿ ವಾಸವಾಗಿದ್ದರು ಎಂದು ಸುಪ್ರೀಂಕೋರ್ಟ್ ತಿಳಿಸಿತ್ತು.

ಜಯಲಲಿತಾ ಗಳಿಸಿದ ಅಕ್ರಮ ಹಣ ವರ್ಗಾವಣೆಗೆ ಅಪರಾಧಿಗಳು ಸಂಚು ನಡೆಸಿದ್ದರು. ಅಕ್ರಮ ಹಣವನ್ನು ವಿವಿಧ ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದರು. ಒಬ್ಬರ ಖಾತೆಯಿಂದ ಮತ್ತೊಬ್ಬರ ಖಾತೆಗೆ ಹಣ ವರ್ಗಾವಣೆಯಾಗಿತ್ತು. ಈ ಹಣದಿಂದಲೇ ಅಪರಾಧಿಗಳು ಅಕ್ರಮವಾಗಿ ಆಸ್ತಿ ಗಳಿಸಿದ್ದರು. ಅಪರಾಧಿಗಳು ಒಳಸಂಚಿನಲ್ಲಿ ಭಾಗಿಯಾಗಿದ್ದಕ್ಕೆ ಇದು ಸಾಕ್ಷಿ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿತ್ತು.

RELATED ARTICLES
- Advertisment -
Google search engine

Most Popular