ಕೆ.ಆರ್.ಪೇಟೆ. ಮಂಡ್ಯ ಜಿಲ್ಲೆಯ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನೇಮಕಗೊಂಡ ಡಾ.ಕೆ.ಮೋಹನ್ರವರನ್ನು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವತಿಯಿಂದ ಅಭಿನಂದಿಸಲಾಯಿತು.
ಈ ಕುರಿತು ಮಾತನಾಡಿದ ತೆಂಡೇಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಸಾದ್ ಡಾ.ಕೆ.ಮೋಹನ್ ತಾಲ್ಲೂಕಿನ ಅಕ್ಕಿಹೆಬ್ಬಾಳು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ, ನಂತರ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ತಾಲ್ಲೂಕಿನಲ್ಲಿ ಸೇವೆ ಸಲ್ಲಿಸಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಅವರ ಅವಧಿಯಲ್ಲಿ ಮಲೇರಿಯಾ ಮತ್ತು ಕ್ಷಯರೋಗ ನಿಯಂತ್ರಣ ಕುರಿತು ಕೈಗೊಂಡ ಕೆಲಸ ಕಾರ್ಯಗಳು ಶ್ಲಾಘನೀಯವಾಗಿವೆ. ನಂತರ ಡಿಪಿಎಂ ಅಧಿಕಾರಿಯಾಗಿ ನಂತರ ಕೊಡಗು ಜಿಲ್ಲಾ ಡಿಹೆಚ್ಓ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದು ಪ್ರಸ್ತುತ ಮಂಡ್ಯ ಜಿಲ್ಲೆಯ ಡಿಹೆಚ್ಓ ಆಗಿ ನೇಮಕಗೊಂಡಿರುವುದು ಸಂತಸದ ವಿಷಯವಾಗಿದೆ. ಅವರು ಹೆಚ್ಚಿನ ಕಾರ್ಯದಕ್ಷತೆಯಿಂದ ಕೆಲಸ ನಿರ್ವಹಿಸಲಿ, ಜಿಲ್ಲೆಯ ಜನತೆಗೆ ಅವರ ಸೇವೆ ಹೆಚ್ಚಿನ ಮಟ್ಟದಲ್ಲಿ ದೊರೆಯಲಿ ಎಂದು ಶುಭಕೋರಿದರು.
ಇದೇ ಸಂದರ್ಭದಲ್ಲಿ ಬಿಪಿಎಂ ವಿನಯ್, ಆರೋಗ್ಯ ನಿರೀಕ್ಷಕರಾದ ಶೀಳನೆರೆಸತೀಶ್, ಧರ್ಮೇಂದ್ರ, ಆರ್.ಎನ್.ಬಸವರಾಜು, ದೇವರಾಜು, ಶೂಶ್ರೂಶ್ರಕ ಪ್ರಶಾಂತ್ ಸೇರಿದಂತೆ ಹಲವರಿದ್ದರು.