Friday, April 18, 2025
Google search engine

Homeರಾಜ್ಯಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮಗೆ ಗೆಲುವು

ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮಗೆ ಗೆಲುವು

ಬಳ್ಳಾರಿ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶಕ್ಕೆ ಸಂಬಂಧಪಟ್ಟಂತೆ ಇದೀಗ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರ ಬಿದ್ದಿದ್ದು, ಸಂಸದ ಇ ತುಕಾರಾಂ ಅವರ ಪತ್ನಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವಂತಹ ಅನ್ನಪೂರ್ಣ ಇ ತುಕಾರಾಮ್ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಬಾರಿ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಒಂದೇ ಬಾಕಿ ಇದೆ.

ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು ತೀವ್ರ ಒಂದು ಹಾವು ಏಣಿಯ ಆಟದಲ್ಲಿ ಕೊನೆಯದಾಗಿ ಅನ್ನಪೂರ್ಣ ತುಕಾರಾಂ ಅವರಿಗೆ ವಿಜಯಲಕ್ಷ್ಮಿ ಒಲಿದಿದ್ದಾಳೆ. ಬಿಜೆಪಿ ಅಭ್ಯರ್ಥಿ ಬಂಗಾರು ಹಣಮಂತ ವಿರುದ್ಧ ಅನ್ನಪೂರ್ಣ ಈ ತುಕಾರಾಂ ಅವರು 9000ಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಮತ್ತೆ ಎಣಿಕೆಯ ಕೇಂದ್ರದ ಬಳಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅನ್ನಪೂರ್ಣ ತುಕಾರಾಂ ಅವರಿಗೆ 88727 ಮತಗಳನ್ನು ಪಡೆದುಕೊಂಡಿದ್ದರೆ, 79,622 ಮತಗಳನ್ನು ಬಂಗಾರು ಹನುಮಂತು ಪಡೆದುಕೊಂಡಿದ್ದಾರೆ. ಹಾಗಾಗಿ ಅನ್ನಪೂರ್ಣ ಅವರು 9105 ಮತಗಳ ಅಂತರದಿಂದ ಗೆಲವು ದಾಖಲಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆ ಅಷ್ಟೇ ಬಾಕಿ ಇದೆ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular