ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಪರಿಶಿಷ್ಟ ಜಾತಿ, ಮಾದಿಗ ಸಮುದಾಯ ಸೇರಿದಂತೆ ಇತರ ಹಿಂದುಳಿದ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸಿ ರಾಜಕೀಯ ಅಧಿಕಾರ ಮತ್ತು ಸರ್ಕಾರದ ಸವಲತ್ತುಗಳನ್ನು ಕಲ್ಪಿಸಲು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬದ್ದವಾಗಿದ್ದು ಇದನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದ ಸರ್ಕಾರ ಒಳಮೀಸಲಾತಿ ಸಮೀಕ್ಷೆ ನಡೆಸುತ್ತಿದ್ದು ಇದನ್ನು ಅರಿಯದ ಒಳಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಭಾಸ್ಕರ್ ಮತ್ತು ವಕೀಲ ಅರುಣ್ಕುಮಾರ್ ಅವರುಗಳು ಕಾಂಗ್ರೆಸ್ ಪಕ್ಷದ ನಾಯಕನ್ನು ಟೀಕಿಸುತ್ತಿರುವುದು ಖಂಡನೀಯ ಎಂದು ತಾಲೂಕು ಕಾಂಗ್ರೆಸ್ ವಕ್ತಾರ ಸೈಯದ್ಜಾಬೀರ್ ಹೇಳಿದ್ದಾರೆ.
ರಾಜ್ಯ ಸರ್ಕಾರದ ಈ ಕೆಲಸಕ್ಕೆ ವಿವಿಧ ಸಂಘಟನೆಗಳು ಮತ್ತು ಸಮಾಜದ ಮುಖಂಡರುಗಳು ವ್ಯಾಪಕ ಬೆಂಬಲ ಸೂಚಿಸುತ್ತಿದ್ದರು ಇವರುಗಳು ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ ಮತ್ತು ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಅವರುಗಳ ಬಗ್ಗೆ ಲಘುವಾಗಿ ಮಾತನಾಡುತ್ತಿರುವುದು ಸರಿಯಲ್ಲಾ ಆದ್ದರಿಂದ ಈ ನಾಯಕರುಗಳು ತಮ್ಮ ಭಾಷೆಯನ್ನು ಬದಲಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣೆ ಮಾಡಲು ಎಲ್ಲರಿಗೂ ಮುಕ್ತ ಸ್ವಾತಂತ್ರ್ಯವಿದೆ ಆದರೆ ಆ ನೆಪದಲ್ಲಿ ಸಂವಿಧಾನಾತ್ಮಕವಾಗಿ ಉನ್ನತ ಹುದ್ದೆಯಲ್ಲಿರುವ ನಾಯಕರುಗಳ ಬಗ್ಗೆ ವೈಯುಕ್ತಿಕ ಟೀಕೆ ಸರಿಯಲ್ಲಾ ಎಂದಿರುವ ಅವರು ಸರ್ಕಾರದ ಬಹುನಿರೀಕ್ಷಿತ ಒಳಮೀಸಲಾತಿ ಜಾರಿ ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ಬರಲಿದೆ ಎಂದು ತಾಲೂಕು ಕಾಂಗ್ರೆಸ್ ವಕ್ತಾರರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಮಹತ್ತರವಾದ ಕೆಲಸದ ಹಿಂದೆ ಲೋಕಸಭೆ ವಿಪಕ್ಷ ನಾಯಕರಾದ ರಾಹುಲ್ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಕಾಂಗ್ರೇಸಿನ ನಾಯಕರುಗಳು ಪರಿಶ್ರಮವಿದ್ದು ಇದಕ್ಕಾಗಿ ಅವರುಗಳನ್ನು ನಾನು ಅಭಿನಂದಿಸುತ್ತೇನೆ ಎಂದಿದ್ದಾರೆ.
ಈ ಹಿಂದೆ ಮಹಾತ್ಮ ಗಾಂಧೀಯವರು ನಡೆಸಿದ ಸ್ವಾತಂತ್ರ್ಯದಲ್ಲಿ ಪರಿಶಿಷ್ಟ ಸಮುದಾಯದ ಸಹಸ್ರಾರು ಬಂದುಗಳು ಭಾಗವಹಿಸಿದ್ದರು ಇಂದು ಒಳಮೀಸಲಾತಿ ಹೋರಾಟದಲ್ಲಿ ಅವರುಗಳು ಪಾಲ್ಗೊಂಡು ಸಹಕಾರ ನೀಡುತ್ತಿವುದನ್ನು ಸ್ವಾಗತಿಸುವುದಾಗಿ ತಿಳಿಸಿರುವ ಅವರು ಭಾಸ್ಕರ್ ಮತ್ತು ಅರುಣ್ಕುಮಾರ್ ಅವರು ವಸ್ತು ಸ್ಥಿತಿ ಅರಿಯದೆ ಬಾಯಿಗೆ ಬಂದAತೆ ಮಾತನಾಡುವುದನ್ನು ಬಿಡಬೇಕು ಎಂದು ಸಲಹೆ ನೀಡಿದ್ದಾರೆ.