ರಾಮನಗರ: ದೇಶದ ಸಂವಿಧಾನದ ಪ್ರಾಮುಖ್ಯತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಸಿದ್ದಪಡಿಸಲಾಗಿರುವ ಸಂವಿಧಾನಜಾಗೃತಿಜಾಥ ಸ್ಥಬ್ತ ಚಿತ್ರ ಸಂಚಾರಕ್ಕೆ ನಗರದಜಿಲ್ಲಾಕ್ರೀಡಾಂಗಣದಲ್ಲಿ ಜ.೨೬ರ ಶುಕ್ರವಾರ ಸಾರಿಗೆ, ಮುಜರಾಯಿ ಸಚಿವರು ಹಾಗೂ ರಾಮನಗರಜಿಲ್ಲಾಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜಕಲ್ಯಾಣಇಲಾಖೆಯ ವತಿಯಿಂದನಿ ರ್ಮಿಸಲಾಗಿರುವ ಈ ಸ್ಥಬ್ತ ಚಿತ್ರ ಜ.೨೬ ರಿಂದ ಫೆ.೨೩ ರವರೆಗೆಜಿಲ್ಲೆಯಎಲ್ಲಾಗ್ರಾಮ ಪಂಚಾಯತ್ಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಂಚರಿಸಲಿದೆ. ಈ ಸಂದರ್ಭದಲ್ಲಿರಾಮನಗರ ವಿಧಾನಸಭಾಕ್ಷೇತ್ರದ ಶಾಸಕರಾದಇಕ್ಬಾಲ್ ಹುಸೇನ್, ನಗರಸಭೆಅಧ್ಯಕ್ಷರಾದ ವಿಜಯಕುಮಾರಿ, ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ರಾಜೇಂದ್ರನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಕಾರ್ತಿಕ್ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಅಧಿಕಾರಿ ದಿಗ್ವಿಜಯ್ ಬೋಡ್ಕೆ, ಅಪರಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಸೇರಿದಂತೆಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.