Saturday, April 19, 2025
Google search engine

Homeರಾಜ್ಯಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಸಿಐಡಿ ವಿಚಾರಣೆಗೆ ಹಾಜರಾದ ಐವರು ಆರೋಪಿಗಳು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಸಿಐಡಿ ವಿಚಾರಣೆಗೆ ಹಾಜರಾದ ಐವರು ಆರೋಪಿಗಳು

ಬೀದರ್: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಂತ ಗುತ್ತಿಗೆದಾರ ಸಚಿನ್ ಕೇಸನ್ನು ಸಿಐಡಿ ಅಧಿಕಾರಿಗಳ ತಂಡದಿಂದ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಇಂದು ನೋಟಿಸ್ ನೀಡಿದ್ದರ ಹಿನ್ನಲೆಯಲ್ಲಿ ಐವರು ಆರೋಪಿಗಳು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಗುತ್ತಿಗೆದಾರ ಸಚಿನ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನವೇ ಡೆತ್ ನೋಟ್ ಬರೆದಿಟ್ಟಿದ್ದರು. ಆ ಡೆತ್ ನೋಟ್ ನಲ್ಲಿ ಎಂಟು ಮಂದಿಯ ಹೆಸರನ್ನು ಉಲ್ಲೇಖಿಸಲಾಗಿತ್ತು. ಈ ಹಿನ್ನಲೆಯಲ್ಲಿ ಜನವರಿ 6ರಂದು ತನಿಖಾ ತಂಡವಾದಂತ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಐವರು ಆರೋಪಿಗಳಿಗೆ ನೋಟಿಸ್ ನೀಡಿದ್ದರು.

ಸಿಐಡಿ ನೋಟಿಸ್ ಹಿನ್ನಲೆಯಲ್ಲಿ ಇಂದು ಬೀದರ್ ನಲ್ಲಿ ಸಿಐಡಿ ಅಧಿಕಾರಿಗಳ ಕಚೇರಿಗೆ ಹಾಜರಾಗಿ, ವಿಚಾರಣೆಯನ್ನು ಎದುರಿಸಿದರು. ಆ ಮೂಲಕ ಗೋರಕನಾಥ ಸಜ್ಜನ್, ನಂದಕುಮಾರ್ ನಾಗಬುಜಂಗಿ, ರಾಜು ಕಪನೂರು, ರಾಮನಗೌಡ ಪಾಟೀಲ್ ಹಾಗೂ ಸತೀಶ್ ಎಂಬುವರು ವಿಚಾರಣೆ ಎದುರಿಸಿದರು.

RELATED ARTICLES
- Advertisment -
Google search engine

Most Popular