Saturday, June 27, 2026
Google search engine

Homeರಾಜಕೀಯಪರಿಷತ್ ಚುನಾವಣೆ ಅಡ್ಡ ಮತದಾನ ತನಿಖೆ ವರದಿ ರಾಜ್ಯಾಧ್ಯಕ್ಷರ ಕೈಗೆ ಸಲ್ಲಿಕೆ

ಪರಿಷತ್ ಚುನಾವಣೆ ಅಡ್ಡ ಮತದಾನ ತನಿಖೆ ವರದಿ ರಾಜ್ಯಾಧ್ಯಕ್ಷರ ಕೈಗೆ ಸಲ್ಲಿಕೆ

ಬೆಂಗಳೂರು : ಪ. ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದ ತನಿಖೆ ನಡೆಸಿದ ಸಿಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಿದೆ.

ಪರಿಷತ್ ಸದಸ್ಯ ಸಿ.ಟಿ ರವಿ, ಶಾಸಕ ಮಹೇಶ್ ಟೆಂಗಿನಕಾಯಿ ಹಾಗೂ ಎನ್ ಮಹೇಶ್ ನೇತೃತ್ವದ ತ್ರಿಸದಸ್ಯ ಸಮಿತಿಯು ಆಂತರಿಕ ಸತ್ಯಶೋಧನೆ ನಡೆಸಿ, ಸಾಂದರ್ಭಿಕ ಸಾಕ್ಷಿ, ಶಂಕೆ, ಮೂಲಗಳಿಂದ ಸಂಗ್ರಹಿಸಿದ ಮಾಹಿತಿ ಹಾಗೂ ಅನುಮಾನ ಇದ್ದ ಶಾಸಕರಿಂದ ಪಡೆದ ಮಾಹಿತಿ ಆಧರಿಸಿ ವರದಿ ಸಿದ್ಧಪಡಿಸಿದ್ದಾರೆ. ಈ ಮಧ್ಯಂತರ ವರದಿಯನ್ನು ಬಿಜೆಪಿ ಕಚೇರಿಯಲ್ಲಿ ಸಲ್ಲಿಕೆ ಮಾಡಿದ್ದು, ಬಳಿಕ ಬಿವೈವಿ ಹಾಗೂ ಸಿಟಿ ರವಿ ಇಬ್ಬರೂ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ.

ನಾಲ್ಕು ದಿನಗಳ ಕಾಲ ಆಂತರಿಕ ತನಿಖೆ ನಡೆಸಿದ ಸಮಿತಿಯು ಒಟ್ಟು ಮೂರು ಪುಟಗಳ ವರದಿಯನ್ನು ಸೀಲ್ಡ್ ಕವರ್‌ನಲ್ಲಿ ಸಲ್ಲಿಕೆ ಮಾಡಿದೆ. ಮೈತ್ರಿ ಪಕ್ಷಗಳಿಂದ ಒಟ್ಟು 12 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಈ ಪೈಕಿ 1 ಅಸಿಂಧು ಮತ. ಬಿಜೆಪಿಯಿಂದ 1 ಅಸಿಂಧು ಮತ ಸೇರಿ ಒಟ್ಟು 4 ಅಡ್ಡಮತ ಆಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದರ ಹೊರತಾಗಿ ಉಳಿದ ಅಡ್ಡ ಮತಗಳು ಜೆಡಿಎಸ್‌ನಿಂದಾಗಿವೆ. ವರದಿಯಲ್ಲಿ ಅಡ್ಡ ಮತ ಚಲಾಯಿಸಿದ ಶಾಸಕರ ಹೆಸರು ಉಲ್ಲೇಖಿಸಿಲ್ಲ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular