ಬೆಂಗಳೂರು: ಆದಾಯ ತೆರಿಗೆ ಇಲಾಖೆ ಸಲಹೆ ಮೇರೆಗೆ ಬೇನಾಮಿ ಆಸ್ತಿ ವಹಿವಾಟಿಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರಕಾರ, 30 ಲಕ್ಷ ರೂ.ಗೂ ಅಧಿಕ ಮೌಲ್ಯದ ಆಸ್ತಿ ನೋಂದಣಿ ವೇಳೆ ಕಾವೇರಿ 2.0 ತಂತ್ರಾಂಶದಲ್ಲಿ ಪಾನ್ ಸಂಖ್ಯೆಸಹಿತ ವಿವರಗಳ ಸಲ್ಲಿಕೆಯನ್ನು ಕಡ್ಡಾಯಗೊಳಿಸಿದೆ.
ಈ ಕುರಿತು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಒಂದು ವೇಳೆ ಪಾನ್ ಸಂಖ್ಯೆ ಮತ್ತಿತರ ವಿವರಗಳನ್ನು ಸಲ್ಲಿಸದಿದ್ದರೆ, ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವುದಿಲ್ಲ ಎಂಬುದನ್ನೂ ಸ್ಪಷ್ಟಪಡಿಸಿದೆ.