ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಡಿ. ೫ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ವಿ. ಶ್ರೀನಿವಾಸ ಪ್ರಸಾದ್ ಅವರು ಘನ ಉಪಸ್ಥಿತಿ ವಹಿಸುವರು. ಶಾಸಕ ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ, ಹೆಚ್.ಎಂ. ಗಣೇಶ್ಪ್ರಸಾದ್, ಡಾ. ಡಿ. ತಿಮ್ಮಯ್ಯ, ಮರಿತಿಬ್ಬೇಗೌಡ, ಸಿ.ಎನ್. ಮಂಜೇಗೌಡ, ಮಧು. ಜಿ. ಮಾದೇಗೌಡ, ನಗರಸಭಾ ಸದಸ್ಯ ಎಂ. ಮಹೇಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಸಮಾರಂಭ ಉದ್ಘಾಟಿಸುವರು. ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕರಾದ ಪ್ರೊ. ವಿಜಯಕುಮಾರಿ ಎಸ್ ಕರಿಕಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮದ ಮುಖ್ಯ ಭಾಷಣ ಮಾಡುವರು. ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಂ.ಆರ್. ಸುಮತಿ ಅವರು ಅಧ್ಯಕ್ಷತೆ ವಹಿಸುವರು.
ಐಕ್ಯೂಎಸಿ ಸಮಿತಿ ಸಂಚಾಲಕ ಪಿ. ಬಾಲಸುಬ್ರಹ್ಮಣ್ಯ, ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ. ಎಂ.ಸಿ. ಪ್ರಭಾವತಿ, ಕ್ರೀಡಾ ಸಮಿತಿ ಸಂಚಾಲಕರಾದ ಡಾ. ಶಾಂತರಾಜು, ಸ್ಕೌಟ್ಸ್ ಮತ್ತು ಗೈಡ್ಸ್ ಸಂಚಾಲಕರಾದ ಡಾ. ಹೆಚ್.ಎಸ್. ರುಕ್ಮಿಣಿ, ರಾಷ್ಟ್ರೀಯ ಸೇವಾ ಯೋಜನೆ ಸಂಚಾಲಕ ಎಸ್.ಆರ್. ದೀಪ, ರೆಡ್ ಕ್ರಾಸ್ ಸಮಿತಿ ಸಂಚಾಲಕರಾದ ಸಿದ್ದರಾಜು ಅವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.