Friday, April 18, 2025
Google search engine

Homeರಾಜ್ಯದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಗ್ಗಿದ ಮಳೆ ಅಬ್ಬರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಗ್ಗಿದ ಮಳೆ ಅಬ್ಬರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಿಂದ ಜೋರಾಗಿದ್ದ ಮಳೆ ಅಬ್ಬರ ಇಂದು ಶನಿವಾರ ಕಡಿಮೆಯಾಗಿದೆ. ಬೆಳಿಗ್ಗೆಯಿಂದಲೂ ಬಿಸಿಲಿನಿಂದ ಕೂಡಿದ ವಾತಾವರಣವಿದೆ. ಮಳೆ ಪ್ರಮಾಣ ಕಡಿಮೆಯಾಗಿದೆ.

ಜಿಲ್ಲೆಯ ನೇತ್ರಾವತಿ, ಕುಮಾರಧಾರ, ಫಾಲ್ಗುಣಿ, ನಂದಿನಿ ಹಾಗೂ ಶಾಂಭವಿ, ನದಿಗಳಲ್ಲೂ ನೀರು ಹರಿವಿನ ಮಟ್ಟ ತಗ್ಗಿದೆ. ಬಂಟ್ವಾಳ ಬಳಿ ಶುಕ್ರವಾರ ಅಪಾಯದ ಮಟ್ಟ ಮೀರಿ ೮.೬ ಮೀ. ವರೆಗೂ ತಲುಪಿದ್ದ ನೀರು ಹರಿವಿನ ಮಟ್ಟ ಇಂದು ೭.೪ ಮೀ.ಗೆ ಇಳಿಕೆಯಾಗಿದೆ.

RELATED ARTICLES
- Advertisment -
Google search engine

Most Popular