Friday, April 18, 2025
Google search engine

Homeರಾಜಕೀಯಕಾಂಗ್ರೆಸ್‌ನಲ್ಲಿ ದಿನೇ ದಿನೇ ಸಿಎಂ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಜಾಸ್ತಿಯಾಗುತ್ತಿದೆ: ಬಿವೈ ವಿಜಯೇಂದ್ರ

ಕಾಂಗ್ರೆಸ್‌ನಲ್ಲಿ ದಿನೇ ದಿನೇ ಸಿಎಂ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಜಾಸ್ತಿಯಾಗುತ್ತಿದೆ: ಬಿವೈ ವಿಜಯೇಂದ್ರ

ಹುಬ್ಬಳ್ಳಿ: ಸಿಎಂ ವೇಟಿಂಗ್ ಪಟ್ಟಿಯಲ್ಲಿ ಡಿಕೆ ಶಿವಕುಮಾರ್ ಮೊದಲ ಸ್ಥಾನದಲ್ಲಿದ್ದಾರೆ. ಕಾಂಗ್ರೆಸ್‌ನಲ್ಲಿ ದಿನೇ ದಿನೇ ಸಿಎಂ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಜಾಸ್ತಿಯಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಜಿಲ್ಲೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಯಾರ ಹೆಸರು ಹೇಳುತ್ತಾರೆ ಅವರೇ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ. ಸರ್ಕಾರದ ಸಿಎಂ ಸ್ಥಾನ ಅಲುಗಾಡುತ್ತಿದೆ. ಎಲ್ಲಿಯವರೆಗೆ ಸಿದ್ದರಾಮಯ್ಯ ಭಂಡತನ ಮುಂದುವರೆಸುತ್ತಾರೋ ಅಲ್ಲಿಯವರೆಗೂ ಸಿಎಂ ಆಗಿ ಇರುತ್ತಾರೆ. ಇದು ಬಹಳಷ್ಟು ದಿನ ನಡೆಯುವುದಿಲ್ಲ. ಇದನ್ನು ಈ ಸರ್ಕಾರದ ಸಚಿವರೇ ಸಹಿಸುವುದಿಲ್ಲ. ಯಾವುದೇ ಅನುಮಾನ ಬೇಡ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ. ಅವರಿಗೆ ಗೊತ್ತಿದೆ, ಸಿದ್ದರಾಮಯ್ಯ ಯಾವ ಸಮಯದಲ್ಲಿ ಬೇಕಾದರೂ ರಾಜೀನಾಮೆ ನೀಡುತ್ತಾರೆ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಕೃಪಾಕಟಾಕ್ಷ ಪಡೆಯಲು ಸಿದ್ದರಾಮಯ್ಯ ಪರವಾಗಿ ಮಾತನಾಡುತ್ತಿದ್ದಾರೆ. ಸರ್ಕಾರದ ಸಚಿವರೇ ಸಿಎಂ ಬದಲಾವಣೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆಕಾಂಕ್ಷಿಗಳು ಗುಪ್ತವಾಗಿ ಸಭೆ ನಡೆಸುತ್ತಿದ್ದಾರೆ. ಯಾರೆಲ್ಲಾ ಐದು ವರ್ಷ ಸಿದ್ದರಾಮಯ್ಯ ಸಿಎಂ ಎಂದು ಹೇಳುತ್ತಿದ್ದಾರೋ, ಅವರೆಲ್ಲ ಮುಖ್ಯಮಂತ್ರಿಗಳ ಆಕಾಂಕ್ಷಿಗಳು ಎಂದು ಹೇಳಿದರು.

RELATED ARTICLES
- Advertisment -
Google search engine

Most Popular