ಪಿರಿಯಾಪಟ್ಟಣ: ತಾಲೂಕು ಪಂಚಾಯಿತಿ ನೂತನ ಕಾರ್ಯನಿರ್ವಾಹಕಾಧಿಕಾರಿಯಾಗಿ ಡಿ.ಬಿ ಸುನಿಲ್ ಕುಮಾರ್ ಅಧಿಕಾರ ವಹಿಸಿಕೊಂಡರು.
ಈ ಹಿಂದಿನ ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್ ಅವರು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಕಾರ್ಯ ನಿರ್ವಾಹಕ ನಿರ್ದೇಶಕರಾಗಿ ವರ್ಗಾವಣೆಯಾದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ತಾ.ಪಂ ಇಒ ಆಗಿದ್ದ ಡಿ.ಬಿ ಸುನಿಲ್ ಕುಮಾರ್ ಅವರು ನಿಯೋಜನೆಗೊಂಡಿದ್ದಾರೆ.