Saturday, April 19, 2025
Google search engine

Homeರಾಜ್ಯಆಪ್ತನಿಂದ ಕೊಲೆ ಬೆದರಿಕೆ, ಗುತ್ತಿಗೆದಾರ ಆತ್ಮಹತ್ಯೆ ಕೇಸ್: ಸಮಗ್ರವಾಗಿ ತನಿಖೆ: ಸಚಿವ ಪ್ರಿಯಾಂಕ್ ಖರ್ಗೆ

ಆಪ್ತನಿಂದ ಕೊಲೆ ಬೆದರಿಕೆ, ಗುತ್ತಿಗೆದಾರ ಆತ್ಮಹತ್ಯೆ ಕೇಸ್: ಸಮಗ್ರವಾಗಿ ತನಿಖೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ: ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಎಂಬಾತ ಪಡೆದ ಹಣ ವಾಪಾಸ್ ಕೇಳಿದಂತ ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಹಾಕಿದ್ದನಂತೆ. ಹೀಗಾಗಿ ಗುತ್ತಿಗೆದಾರ ಇಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನಗೆ ಈಗಷ್ಟೇ ವಿಷಯ ತಿಳಿಯಿತು. ಯಾರೇ ಇರಲಿ, ನನ್ನ ಆಪ್ತನೇ ಆಗಿರಲಿ ತನಿಖೆ ಮಾಡಿಸುತ್ತೇವೆ ಎಂದರು. ಅದು ನನ್ನ ಇಲಾಖೆಗೆ ಬರುತ್ತೆ. ಇಲಾಖಾ ತನಿಖೆ ಕೂಡ ನಡೆಸಲಾಗುತ್ತದೆ. ನಾನು ಯಾವುದೇ ಮುಚ್ಚು ಮರೆ ಮಾಡೋದಿಲ್ಲ. ಸಮಗ್ರ ತನಿಖೆಯಾಗಲಿ ಅಂತ ಗೃಹ ಸಚಿವರಿಗೂ ಮನವಿ ಮಾಡುವುದಾಗಿ ಹೇಳಿದರು.

ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಲಿ. ನನ್ನ ಆಪ್ತ ಅಥವಾ ಯಾರು ಅಂತ ತನಿಖೆಯಿಂದ ಗೊತ್ತಾಗುತ್ತದೆ ಎಂಬುದಾಗಿ ಬೆಳಗಾವಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

RELATED ARTICLES
- Advertisment -
Google search engine

Most Popular