Saturday, November 15, 2025
Google search engine

Homeರಾಜ್ಯಸುದ್ದಿಜಾಲಬೆಳಗಾವಿಯಲ್ಲಿ ಡಿ. 8ರಿಂದ ಚಳಿಗಾಲದ ಅಧಿವೇಶನ: ಎಷ್ಟು ದಿನ ನಡೆಯುತ್ತೆ ಕಲಾಪ? ಏನೇನು ಚರ್ಚೆ?

ಬೆಳಗಾವಿಯಲ್ಲಿ ಡಿ. 8ರಿಂದ ಚಳಿಗಾಲದ ಅಧಿವೇಶನ: ಎಷ್ಟು ದಿನ ನಡೆಯುತ್ತೆ ಕಲಾಪ? ಏನೇನು ಚರ್ಚೆ?

ವರದಿ :ಸ್ಟೀಫನ್ ಜೇಮ್ಸ್

ಡಿಸೆಂಬರ್ 8 ರಿಂದ 10 ದಿನಗಳ ಕಾಲ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸಚಿವ ಸಂಪುಟ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಅಲ್ಲದೆ, ಬೆಂಗಳೂರು ಗವರ್ನೆನ್ಸ್ ತಿದ್ದುಪಡಿ, ಐಟಿ, ಬಾಹ್ಯಾಕಾಶ ನೀತಿ ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಹೈಲೈಟ್ಸ್‌:

  • ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದ ದಿನಾಂಕ ನಿಗದಿ.
  • ಡಿ. 8ರಿಂದ 10 ದಿನಗಳವರೆಗೆ ನಡೆಯಲಿರುವ ಅಧಿವೇಶನ.
  • ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಅಧಿವೇಶನ.

ಡಿಸೆಂಬರ್ 8 ರಿಂದ ಬೆಳಗಾವಿ ಅಧಿವೇಶನ ಆರಂಭವಾಗಲಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್ ಪಾಟೀಲ್ ಮಾತನಾಡಿ, ವಿಧಾನಮಂಡಲ ಅಧಿವೇಶನದ ಬಗ್ಗೆ ಮಾಹಿತಿಯನ್ನು ನೀಡಿದರು.

ಸಂಪುಟದಲ್ಲಿ ಸಿಎಂ, ಡಿಸಿಎಂಗೆ ಅಭಿನಂದನೆ

ಮೇಕೆದಾಟು ಯೋಜನೆ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಲಾಯ್ತು. ಈ ಬಗ್ಗೆ ಮಾತನಾಡಿದ ಸಚಿವರು, “ಮೇಕೆದಾಟು ರಾಜಕೀಯ ಹಾಗೂ ಕಾನೂನಾತ್ಮಕ ಹೋರಾಟದ ಹಿನ್ನೆಲೆಯಲ್ಲಿ ತಮಿಳುನಾಡು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅರ್ಜಿ ವಜಾ ಆಗಿದೆ. ಹೀಗಾಗಿ ಯೋಜನೆಗೆ ಮುಂದಿನ ಹೆಜ್ಜೆ ಇಡಲು ಹಸಿರು ನಿಶಾನೆ ಸಿಕ್ಕಿದೆ. ಮೇಕೆ ದಾಟು ರಾಜಕೀಯ ಹಾಗೂ ಕಾನೂನಾತ್ಮಕ ಹೋರಾಟ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಕ್ಯಾಬಿನೆಟ್ ಅಭಿನಂದನೆ ಸಲ್ಲಿಸಿದೆ” ಎಂದರು.

ಸಂಪುಟ ಇತರ ಹೈಲೈಟ್ಸ್

  • ಗ್ರೇಟರ್ ಬೆಂಗಳೂರು ಗವರ್ನೆನ್ಸ್ (ಎರಡನೇ ತಿದ್ದುಪಡಿ) ವಿಧೇಯಕ 2025ಕ್ಕೆ ಸಂಪುಟ ಸಭೆ ಅನುಮೋದನೆ.
  • ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳ ಸ್ವಚ್ಛತೆಗಾಗಿ 46 ಯಾಂತ್ರಿಕ ಕಸಗುಡಿಸುವ ಯಂತ್ರಗಳನ್ನು (Mechanical Sweeping Machines) ಏಳು ವರ್ಷಗಳ ಅವಧಿಗೆ ಬಾಡಿಗೆ ಆಧಾರದ ಮೇಲೆ ಒಟ್ಟು ರೂ.613.25 ಕೋಟಿಗಳ ಅಂದಾಜು ಮೊತ್ತದಲ್ಲಿ ಪಡೆಯಲು ಸಂಪುಟ ಆಡಳಿತಾತ್ಮಕ ಅನುಮೋದನೆ.
  • ಬೆಳಗಾವಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿದಿನ ಸಂಗ್ರಹವಾಗುವ 150 ಟನ್‌ಗಳಷ್ಟು ಹಸಿ ತ್ಯಾಜ್ಯವನ್ನು Compressed Bio Gas (CBG) ಘಟಕದ ಮೂಲಕ ಸಂಸ್ಕರಿಸಲು Gas Authority of India Limited (GAIL) ತುರುಮುರಿ ತ್ಯಾಜ್ಯ ನಿರ್ವಹಣೆ ಪ್ರದೇಶದಲ್ಲಿ 10 ಎಕರೆ ಜಾಗವನ್ನು 25 ವರ್ಷಗಳ ಅವಧಿಗೆ Nominal Lease Rate ಆಧಾರದ ಮೇಲೆ ವಹಿಸಿಕೊಡಲು ಅನುಮೋದನೆ.
  • ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮಾನಿಟರಿಂಗ್, ನಿಯಂತ್ರಣ ಮತ್ತು ಮೇಲ್ವಿಚಾರಣೆಗಾಗಿ 12003 ಮೀನುಗಾರಿಕಾ ದೋಣಿಗಳಿಗೆ ರೂ.43.69 ಕೋಟಿಗಳ ವೆಚ್ಚದಲ್ಲಿ (ಕೇಂದ್ರ: ರೂ.26.21 ಕೋಟಿಗಳು, ರಾಜ್ಯ: ರೂ.17.48 ಕೋಟಿಗಳು) ದ್ವಿಮುಖ ಸಂಪರ್ಕ ಸಾಧನಗಳನ್ನು ಅಳವಡಿಸಲು ಆಡಳಿತಾತ್ಮಕ ಅನುಮೋದನೆ.
  • ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರ ಹುದ್ದೆಗಳು) (ಕೋರ್ಟ್ ಮ್ಯಾನೇಜರ್‌ಗಳ ವಿಲೀನಾತಿ) (ವಿಶೇಷ) ನಿಯಮಗಳು, 2025″ ಮತ್ತು “ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರ ಹುದ್ದೆಗಳು) ಕೋರ್ಟ್ ಮ್ಯಾನೇಜ‌ರ್ ಗಳ ನೇಮಕಾತಿ ಮತ್ತು ಸೇವಾ ಷರತ್ತುಗಳು (ವಿಶೇಷ) ನಿಯಮಗಳು, 2025ಗಳಿಗೆ ಅನುಮೋದನೆ.
  • ಮೈಸೂರು ನಗರದಲ್ಲಿರುವ ಸರ್ಕಾರಿ ಅತಿಥಿ ಗೃಹದ ನೌಕರರ ವಸತಿ ಗೃಹಗಳ ಆವರಣದಲ್ಲಿ ಶಾಸಕರ ಹಾಗೂ ಸಂಸದರ ಭವನವನ್ನು ಅಂದಾಜು 15 ಕೋಟಿಗಳ ಮೊತ್ತದಲ್ಲಿ ನಿರ್ಮಿಸಲು ಅನುಮೋದನೆ.
  • ಕರ್ನಾಟಕ ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-2030ಕ್ಕೆ ಅನುಮೋದನೆ.
  • ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ 2025-2030ಕ್ಕೆ ಅನುಮೋದನೆ. ಎಐ, ಹಸಿರು ಐಟಿ ಹಾಗೂ ಉದಯೋನ್ಮುಖ ತಂತ್ರಜ್ಞಾನಕ್ಕೆ ಆದ್ಯತೆ ನೀಡುವ ಗುರಿ. ಸ್ಥಳೀಯ ಆರ್ಥಿಕ ವೇಗವರ್ಧನೆ ಕಾರ್ಯಕ್ರಮ (LEAP) ಅಡಿಯಲ್ಲಿ ರಕ್ಷಣಾ ತಂತ್ರಜ್ಞಾನ ಮತ್ತು ಕೈಗಾರಿಕೆ 5.0 ಗಾಗಿ ಧಾರ್ತಿ: ಪ್ರತಿಷ್ಠಾನ, IIT ಧಾರವಾಡ ಇವರಿಂದ ಶ್ರೇಷ್ಠತಾ ಕೇಂದ್ರ (CoE) ಗಳನ್ನು18 ಕೋಟಿಗಳ ಅಂದಾಜು ಮೊತ್ತದಲ್ಲಿ 5 ವರ್ಷಗಳ ಅವಧಿಯಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ.

ಸ್ಥಳೀಯ ಆರ್ಥಿಕ ವೇಗವರ್ಧನೆ ಕಾರ್ಯಕ್ರಮ (LEAP) ಅಡಿಯಲ್ಲಿ IT ಧಾರವಾಡದಲ್ಲಿರುವ ಕೃತಕ ಬುದ್ಧಿಮತ್ತೆ ಮತ್ತು ಕಂಪ್ಯೂಟಿಂಗ್ ಕೇಂದ್ರದಲ್ಲಿ ಉತ್ಕೃಷ್ಟತಾ ಕೇಂದ್ರ (CoE)ನ್ನು 18 ಕೋಟಿಗಳ ಅಂದಾಜು ಮೊತ್ತದಲ್ಲಿ 5 ವರ್ಷಗಳ ಅವಧಿಯಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ. *ಚಿತ್ರದುರ್ಗ ಜಿಲ್ಲೆ, ಮೊಳಕಾಲ್ಕೂರು ತಾಲ್ಲೂಕು, ಸೊಲೇನಹಳ್ಳಿ ಗ್ರಾಮದ ಸ.ನಂ. 22ರಲ್ಲಿ 0.06 ಗುಂಟೆ ಜಮೀನನ್ನು ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್ ಗೆ ಮಂಜೂರು.

ನವೆಂಬರ್ 20 ರ ಡೆಡ್‌ಲೈನ್

ರಾಜ್ಯ ಸರ್ಕಾರಕ್ಕೆ ನವೆಂಬರ್ 20 ಕ್ಕೆ ಎರಡೂವರೆ ವರ್ಷಗಳು ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ನಾಯಕತ್ವ ಬದಲಾವಣೆ ಕುರಿತ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಗಡುವು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ, ಮುಂದಿನ ಕೆಲವೇ ದಿನಗಳಲ್ಲಿ ಯಾವ ರೀತಿಯ ಬೆಳವಣಿಗೆಗಳು ನಡೆಯಲಿವೆ ಎಂಬುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸದ್ಯದ ಮಟ್ಟಿಗೆ ಈ ವಿಚಾರವು ರಾಜಕೀಯ ವಲಯದಲ್ಲಿ ಹಾಟ್ ಟಾಪಿಕ್ ಆಗಿದ್ದು, ಈ ಇಡೀ ಸನ್ನಿವೇಶವು ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದರ ಬಗ್ಗೆ ಎಲ್ಲರ ಚಿತ್ತ ನೆಟ್ಟಿದೆ.

2026ರ ಸಾರ್ವತ್ರಿಕ ರಜಾದಿನ ಪಟ್ಟಿಗೆ ಸರ್ಕಾರ ಅನುಮೋದನೆ

ಕರ್ನಾಟಕ ಸರ್ಕಾರವು 2026ನೇ ಸಾಲಿನ ಸಾರ್ವತ್ರಿಕ ರಜೆಗಳ ಪಟ್ಟಿಗೆ ಅನುಮೋದನೆ ನೀಡಿದೆ. ಮುಂದಿನ ವರ್ಷ ರಾಷ್ಟ್ರೀಯ ಮತ್ತು ನಾಡ ಹಬ್ಬಗಳನ್ನು ಒಳಗೊಂಡಂತೆ ಒಟ್ಟು 20 ದಿನಗಳ ಸರ್ಕಾರಿ ರಜೆಗಳು ಲಭ್ಯವಿರಲಿವೆ. ಈ ಅಧಿಕೃತ ಪಟ್ಟಿಯಿಂದ ಭಾನುವಾರಗಳಂದು ಬರುವ ಕೆಲವು ಹಬ್ಬಗಳು ಮತ್ತು ಎರಡನೇ ಶನಿವಾರದ ರಜೆಗಳನ್ನು ಹೊರತುಪಡಿಸಲಾಗಿದೆ. ಈ ಮೂಲಕ, ಸರ್ಕಾರಿ ನೌಕರರಿಗೆ ದೊರೆಯುವ ರಜಾ ದಿನಗಳ ಸಂಖ್ಯೆಯನ್ನು ನಿಖರವಾಗಿ ನಿಗದಿಪಡಿಸಲಾಗಿದೆ.

RELATED ARTICLES
- Advertisment -
Google search engine

Most Popular