ನವದೆಹಲಿ: ನಾಳೆ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆಗೆ ತೀರ್ಮಾನ ಮಾಡಲಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ಇಂದು ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಸಂಜೆ ಕೇಂದ್ರ ಸಚಿವರ ಜೊತೆ ಸಭೆ ನಡೆಯಲಿದೆ. ಸಭೆ ಬಳಿಕ ನಾಳಿನ ಹೋರಾಟದ ರೂಪರೇಷೆ ಘೋಷಣೆಯಾಗಲಿದೆ. ರೈತರ ಸಾಲ ಮನ್ನಾ, ರೈತರಿಗೆ ಪಿಂಚಣಿ, ಬೆಂಬಲ ಬೆಲೆ ಕಾನೂನು ಹಾಗೂ ಸ್ವಾಮಿನಾಥನ್ ವರದಿ ಅನುಷ್ಠಾನಕ್ಕೆ ಮನವಿ ಮಾಡದ್ದೆವು. ಕೇಂದ್ರ ಬಿಜೆಪಿ ಸರ್ಕಾರ ಈವರೆಗೂ ರೈತರ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಹೇಳಿದರು.
ದೆಹಲಿಗೆ ಆಗಮಿಸುವ ರೈತರನ್ನು ತಡೆಯಲಾಗುತ್ತಿದೆ. ಕರ್ನಾಟಕದಿಂದ ಆಗಮಿಸುತ್ತಿದ್ದ ೧೦೦ಕ್ಕೂ ಹೆಚ್ಚು ರೈತರನ್ನು ಮಧ್ಯಪ್ರದೇಶದ ಭೋಪಾಲ್ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತರ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ ಎಂದು ಅಕ್ರೋಶ ವ್ಯಕ್ತಪಡಿಸಿರು.