ಬೆಂಗಳೂರು : ಜಿಲ್ಲೆಯ ಸಾರ್ವಜನಿಕರಿಗೆ ತಿಳಿಸುವುದೇನೆಂದರೆ 05/08/2023 ರಿಂದ 08/08/2023 ರವರೆಗೆ ಗೌರವಾನ್ವಿತ ನ್ಯಾಯಮೂರ್ತಿ0ಕೆ.ಎನ್. ಫಣೀಂದ್ರ, ಉಪಲೋಕಾಯುಕ್ತರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರವಾಸ ಕೈಗೊಂಡಿರುತ್ತಾರೆ.
ಸದರಿ ಪ್ರವಾಸದ ಅವಧಿಯಲ್ಲಿ ದಿನಾಂಕ: 05/08/2023 ರಂದು ಬೆಳಿಗ್ಗೆ 10:00 ರಿಂದ 01.30 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ 5.00 ರವರೆಗೆ “ಜಿಲ್ಲಾ ಆಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು”, ಇಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ಹಮ್ಮಿಕೊಂಡಿರುವುದರಿಂದ ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ/ನೌಕರರಿಂದ ತಮಗೆ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರು ಆಗಿದ್ದರೆ ಅಥವಾ ಅಧಿಕಾರಿ/ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ಯಾವುದೇ ತರಹದ ತೊಂದರೆಗಳಾಗಿದ್ದರೆ ಸಾರ್ವಜನಿಕರು ಉಪಲೋಕಾಯುಕ್ತರ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ. ಸದರಿ ಅಹವಾಲುಗಳನ್ನು ಉಪಲೋಕಾಯುಕ್ತರು ಸ್ವೀಕರಿಸಲು, ಬಗೆಹರಿಸಲು ಮೇಲ್ಕಂಡಂತೆ ಸಮಯ ನಿಗದಿಪಡಿಸಿರುತ್ತಾರೆ.
ಮುಂದುವರೆದು, ದಿನಾಂಕ: 07/08/2023 ರಂದು ಬೆಳಿಗ್ಗೆ 11 ಗಂಟೆಯಿಂದ 1.30 ಗಂಟೆಯವರೆಗೆ ಮತ್ತು ಮಧ್ಯಾಹ್ನ 2.00 ಗಂಟೆಯಿಂದ 4.00 ಗಂಟೆಯವರೆಗೆ ಜಿಲ್ಲಾ ಆಡಳಿತ ಭವನ, ಬೀರಸಂದ್ರ, ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಇಲ್ಲಿ ಜಿಲ್ಲೆಗೆ ಸಂಬಂಧಪಂಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ), ‘ತನಿಖೆ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸುತ್ತಾರೆ. ಆದ್ದರಿಂದ ದೂರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಈ ಮೂಲಕ ಅಧಿಕೃತ ಪ್ರಕಟಣೆ ತಿಳಿಸಿದೆ.