ವರದಿ: ಎಡತೊರೆ ಮಹೇಶ್
ದಿನಾಂಕ :16 -06 -2025 ರಿಂದ 31 – 06-2025ರ ವರೆಗೆ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಪ್ರತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ . ಈ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕು ದಂಡಾಧಿಕಾರಿಗಳಾದ ಶ್ರೀನಿವಾಸ್ ರವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.
ಈ ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಅಧಿಕಾರಿಗಳಾದ ಡಾ” ರವಿಕುಮಾರ್ ರವರು ಮಾತನಾಡಿ ದಿನಾಂಕ :16 -06 -2025 ರಿಂದ 31 – 06-2025ರ ವರೆಗೆ. ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಪ್ರತ್ಯಕ್ಷಿಕೆ ಕಾರ್ಯಕ್ರಮ ಪ್ರತಿ ವರ್ಷದಂತೆ ಈ ವರ್ಷವೂ ಸಹ ಕಾರ್ಯಕ್ರಮವನ್ನು ನಡೆಸುತ್ತೇವೆ ಈ ಕಾರ್ಯಕ್ರಮದ ಉದ್ದೇಶ ಅತಿಸಾರ ಭೇದಿ ಜಿಂಕ್ ಕೊರತೆಯಿಂದಲೇ ಹೆಚ್ಚಿನ ಮಕ್ಕಳು ಸಾವುಗಳು ಸಂಭವಿಸದ ಹಾಗೆ ತಡೆಗಟ್ಟುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹುಟ್ಟಿದ ಮಗು ಸೇರಿ 0-5 ವರ್ಷದೊಳಗಿನ ಮಕ್ಕಳಲ್ಲಿ ಅತಿಸಾರ ಭೇದಿ ನಿಯಂತ್ರಣ ಮಾಡುವ ದೃಷ್ಟಿಯಲ್ಲಿ ಇಟ್ಟುಕೊಂಡು ಅತಿಸಾರ ನಿಯಂತ್ರಣ ಪಾಕ್ಷಿಕ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ನಡೆಸುತ್ತೇವೆ.
ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ,ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನಲ್ಲಿರುವ ಒಟ್ಟು 16334 0-5 ವರ್ಷದೊಳಗಿನ ಎಲ್ಲಾ ಮಕ್ಕಳ ಮನೆ ಮನೆಗೆ ಭೇಟಿ ನೀಡಿ ORS ದ್ರಾವಣ ಮತ್ತು ಜಿಂಕ್ ಮಾತ್ರೆಗಳನ್ನು ನೀಡಲಾಗುವುದು ಅದಲ್ಲದೆ ತಾಯಂದಿರಿಗೆ ORS ದ್ರಾವಣ ತಯಾರಿಸುವುದರ ಬಗ್ಗೆ ಪ್ರಾತ್ಯಕ್ಷಿಕೆ, ಮಾಹಿತಿ ನೀಡುವುದರ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮಕ್ಕಳಲ್ಲಿ ಅತಿಸಾರ ಭೇದಿಯಾದಾಗ ಜಿಂಕ್ ಮಾತ್ರೆಗಳನ್ನು ಬಳಸುವ ವಿಧಾನದ ಕುರಿತು ತಾಯಂದಿರಿಗೆ ಮಾಹಿತಿಯನ್ನು ನೀಡಲಾಗುತ್ತದೆ , ಆರೋಗ್ಯ ಸಿಬ್ಬಂದಿ ವರ್ಗದವರು ಮತ್ತು ಆಶಾ ಕಾರ್ಯಕರ್ತರ ಮೂಲಕ ಶಾಲೆಗಳಿಗೆ ಹೋಗಿ ಮಕ್ಕಳಿಗೆ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು. ಈ ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಇನ್ನಿತರರು ಹಾಜರಿದ್ದರು.