ಬೆಂಗಳೂರು: ಡಿ ಕೆ ಸುರೇಶ್ ಆಪ್ತ ಹಾಗೂ ಕೋಣನಕುಂಟೆ ಬ್ಲಾಕ್ ಮಾಜಿ ಕಾರ್ಪೊರೇಟರ್ ಗಂಗಾಧರ್ ಎಂಬುವವರ ಮನೆ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಇಂದು(ಏ.24) ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಸತತ 8 ಗಂಟೆಯಿಂದ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಇನ್ನು ಈ ಕುರಿತು ವಿಷಯ ತಿಳಿಯುತ್ತಿದ್ದಂತೆ ಮಾಜಿ ಕಾರ್ಪೊರೇಟರ್ ಗಂಗಾಧರ್ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿ ಧರಣಿ ನಡೆಸಿದ್ದಾರೆ.
ಜೊತೆಗೆ ಡಿಕೆ ಸುರೇಶ್ ಅವರನ್ನು ಟಾರ್ಗೆಟ್ ಮಾಡಿ ಅವರ ಆಪ್ತರ ಮೇಲೆ ಐಟಿ ದಾಳಿ ಮಾಡುತ್ತಿದ್ದಾರೆ ಎಂದು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ.
ಈ ಹಿನ್ನಲೆ ಕೋಣನಕುಂಟೆ, ಅಂಜಾನಪುರ ಹಾಗೂ ಅವಲಹಳ್ಳಿ ಭಾಗದಲ್ಲಿ ಬೆಳಿಗ್ಗೆಯಿಂದ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.