Thursday, April 10, 2025
Google search engine

Homeರಾಜ್ಯ‘ಬೇರೆ ನಟರನ್ನು ನಿಂದಿಸಬೇಡಿ’; ನಟ ದರ್ಶನ್ ಫ್ಯಾನ್​ ಪೇಜ್ ಕಡೆಯಿಂದ ಅಭಿಮಾನಿಗಳಿಗೆ ಮನವಿ

‘ಬೇರೆ ನಟರನ್ನು ನಿಂದಿಸಬೇಡಿ’; ನಟ ದರ್ಶನ್ ಫ್ಯಾನ್​ ಪೇಜ್ ಕಡೆಯಿಂದ ಅಭಿಮಾನಿಗಳಿಗೆ ಮನವಿ

ನಟ ದರ್ಶನ್ ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದಿದ್ದಾರೆ. ಕರ್ನಾಟಕ ಹೈಕೋರ್ಟ್ ದರ್ಶನ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಈ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಈಗ ಸಿಕ್ಕಿರುವುದು ಆರು ವಾರಗಳ ಮಧ್ಯಂತರ ಜಾಮೀನು. ಇದಕ್ಕೆ ಸಾಕಷ್ಟು ಷರತ್ತುಗಳನ್ನು ಕೂಡ ಹಾಕಲಾಗಿದೆ. ಈ ಮಧ್ಯೆ ದರ್ಶನ್ ಅವರ ಅಧಿಕೃತ ಫ್ಯಾನ್​ ಪೇಜ್ ಕಡೆಯಿಂದ ಮನವಿ ಒಂದು ಬಂದಿದೆ.

ದರ್ಶನ್ ಬಂಧನಕ್ಕೆ ಒಳಗಾದಾಗಿನಿಂದಲೂ ಅವರ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಅಗ್ರೆಸ್ಸಿವ್ ಆಗಿ ಪೋಸ್ಟ್ ಮಾಡುತ್ತಾ ಬರುತ್ತಿದ್ದಾರೆ. ಬೇರೆ ಕಲಾವಿದರನ್ನು, ಮಾಧ್ಯಮದವರ ಬಗ್ಗೆ ಕೆಟ್ಟದಾಗಿ ಮಾತನಾಡುವ ಕೆಲಸ ಮುಂದುವರಿದಿದೆ. ಇದಕ್ಕೆ ತಡೆ ಬಿದ್ದಿಲ್ಲ. ಈಗ ದರ್ಶನ್​ಗೆ ಜಾಮೀನು ಸಿಕ್ಕಿದೆ. ಅವರು ಈ ಖುಷಿಯಲ್ಲಿ ಬೇರೆ ರೀತಿಯಲ್ಲಿ ಪ್ರತಿಕ್ರಿಯೆ ನೀಡುವ ಭಯ ಇದೆ. ಹೀಗಾಗಿ, ಫ್ಯಾನ್ಸ್ ಕಡೆಯಿಂದಲೇ ಇತರ ಅಭಿಮಾನಿಗಳಿಗೆ ಮನವಿ ಮಾಡಲಾಗಿದೆ.

ದರ್ಶನ್ ಅವರ ಅಧಿಕೃತ ಫ್ಯಾನ್​ಪೇಜ್ ಆದ ‘ಡಿ ಕಂಪನಿ’ ಈ ಬಗ್ಗೆ ಪೋಸ್ಟ್ ಮಾಡಿದೆ. ‘ಎಲ್ಲಾ ತೂಗುದೀಪ ಪರಿವಾರದ ಅಭಿಮಾನಿಗಳಿಗೆ ಈ ಮೂಲಕ ತಿಳಿಸುವುದು ಏನೆಂದರೆ, ನಮ್ಮ ಪ್ರೀತಿಯ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರವರಿಗೆ ಜಾಮೀನು ಸಿಕ್ಕಿದೆ. ಈ ಸಂತೋಷದ ಸಂಭ್ರಮದಲ್ಲಿ ಅಭಿಮಾನಿಗಳು ಯಾವುದೇ ಕಾರಣಕ್ಕೂ ಮಾಧ್ಯಮದವರು, ರಾಜಕಾರಣಿಗಳು, ಬೇರೆ ನಟರು ಹಾಗೂ ಕಾನೂನಿನ ಬಗ್ಗೆ ನಿಂದನೆ ಬೇಡ’ ಎಂದು ಕೋರಲಾಗಿದೆ.

ಸದ್ಯ ದರ್ಶನ್​ಗೆ ಸಿಕ್ಕಿರುವುದು ಮಧ್ಯಂತರ ಜಾಮೀನು ಅಷ್ಟೇ. ಅನಾರೋಗ್ಯದ ಕಾರಣಕ್ಕೆ ಈ ಜಾಮೀನು ಕೊಡಲಾಗಿದೆ. ಅವರಿಗೆ ಕೋರ್ಟ್ ಕಡೆಯಿಂದ ಆರು ವಾರಗಳ ಸಮಾಯವಕಾಶ ಸಿಕ್ಕಿದೆ. ಈ ಅವಧಿಯಲ್ಲಿ ಅವರು ಚಿಕಿತ್ಸೆ ಪಡೆದು ಬರಬೇಕಿದೆ.

RELATED ARTICLES
- Advertisment -
Google search engine

Most Popular