ಮೈಸೂರು:`ಹಾವುಗಳ ಬಗ್ಗೆ ಅನಗತ್ಯ ಭಯದಿಂದ ಅವುಗಳನ್ನು ಸಾಯಿಸಲಾಗುತ್ತಿದೆ. ಎಲ್ಲಾ ಹಾವುಗಳು ವಿಷಕಾರಿಯಲ್ಲ’ ಎಂದು ಉರಗ ರಕ್ಷಕ ಸ್ನೇಕ್ ಶ್ಯಾಮ್ ಹೇಳಿದರು.
ನಗರದ ಜೆ ಎಲ್ ಬಿ ರಸ್ತೆಯಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮುಂಭಾಗ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಪರಿಸರ ಸ್ನೇಹಿ ತಂಡದ ಆಶ್ರಯದಲ್ಲಿ ಹಾವುಗಳ ದಿನದ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅರಣ್ಯ ಇಲಾಖೆ ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಿರುವುದಕ್ಕೆ ಸಾರ್ವಜನಿಕರು ಸಹಕರಿಸಬೇಕು ನಾಗರಹಾವು, ಕಾಳಿಂಗ ಸರ್ಪ ವಿಷಕಾರಿಯಾಗಿದ್ದು, ಹಪ್ಪಟೆ, ಕೇರೆ ಹಾವು, ಹಸಿರು ಹಾವು ಮುಂತಾದವು ವಿಷಕಾರಿಯಲ್ಲ. ಕೆಲವು ಹಾವುಗಳು ಹೆಚ್ಚು ವಿಷಕಾರಿಯಲ್ಲದಿದ್ದರೂ, ಹಪ್ಪಟೆ ಹಾವು ಕಚ್ಚಿದರೆ ವೈದ್ಯರ ಬಳಿ ತೆರಳಿ ಚಿಕಿತ್ಸೆ ಪಡೆಯಬೇಕು. ಹಾವುಗಳ ಬಗ್ಗೆ ಅನಗತ್ಯ ಭಯ ಬೇಡ’ ಎಂದು ಸಲಹೆ ನೀಡಿದರು.
ಹಾವು ಕಚ್ಚಿದಾಗ ಬಹುತೇಕ ಜನರು ಭಯದಿಂದ ಹೃದಯಾಘಾತದಿಂದ ಸಾವನ್ನಪ್ಪುತ್ತಾರೆ. ಹಾವು ಕಚ್ಚಿದಾಗ ವ್ಯಕ್ತಿಗೆ ಧೈರ್ಯ ತುಂಬಬೇಕು ಮತ್ತು ಸಾಧ್ಯವಾದಷ್ಟು ಬೇಗ ಸಮೀಪದ ಆಸ್ಪತ್ರೆಗೆ ಕರೆದೊಯ್ಯಬೇಕು’ ಎಂದರು.
86000 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಉರಗ ರಕ್ಷಕ ಸ್ನೇಕ್ ಶಾಮ್ ಅವರನ್ನು ಅಭಿನಂದಿಸಲಾಯಿತು.
ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಮಾತನಾಡಿ ಕೋವಿಡ್ ನಂತಹ ಕಷ್ಡಕಾಲದಲ್ಲೂ ಮನೆಗಳಿಗೆ ಹಾವು ಬಂದಾಗ ಸ್ನೇಕ್ ಶ್ಯಾಮ್ ರವರು ಹಾವುನ್ನ ಸಂರಕ್ಷಿಸಿದ್ದಾರೆ, ಅಂತರಾಷ್ಟ್ರೀಯ ಉರಗತಜ್ಞ ಸ್ನೇಕ್ ಶ್ಯಾಮ್ ರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ, ಅಷ್ಟೇಅಲ್ಲದೇ 86ಸಾವಿರಕ್ಕೂ ಹೆಚ್ಚು ಹಾವನ್ನ ಸಂರಕ್ಷಿಸಿದ್ದಾರೆ, ಪರಿಸರ ಸಂರಕ್ಷಣೆ ಜೊತೆಯಲ್ಲೆ ಧಾರ್ಮಿಕ ಕೇಂದ್ರವನ್ನ ಸ್ಥಾಪಿಸಿರುವುದು ಶ್ಲಾಘನೀಯ, ಪರಿಸರ ಸಂರಕ್ಷಣೆ ವಿಚಾರವಾಗಿ ಪಠ್ಯಪುಸ್ತಕಗಳಲ್ಲಿ ಸ್ನೇಕ್ ಶ್ಯಾಮ್ ರವರ ಸೇವೆ ಮತ್ತು ಪರಿಸರ ಕಾಳಜಿಯ ವಿಷಯದ ಬಗ್ಗೆ ರಾಜ್ಯ ಸರ್ಕಾರ ಅಳವಡಿಸಿ ಸಣ್ಣಮಕ್ಕಳಲ್ಲಿ ಉರಗ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು
ಇದೇ ಸಂದರ್ಭದಲ್ಲಿ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ರಾಕೇಶ್, ಪ್ರಸನ್ನ (ಅಪ್ಪಿ) ಬೈರತಿ ಲಿಂಗರಾಜು, ಹರೀಶ್ ನಾಯ್ಡು, ರವಿಚಂದ್ರ, ದುರ್ಗಾ ಪ್ರಸಾದ್, ಗಿರೀಶ್ ರಾಮ್ ಮೂರ್ತಿ, ಹಾಗೂ ಇನ್ನಿತರರು ಹಾಜರಿದ್ದರು